ಮೈಸೂರು : ನಗರದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಅಪರಾ ಸಂಖ್ಯೆಯಲ್ಲಿ ಸಾರ್ವಜನಿಕರು ಹರಿದು ಬರುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟ ಹೂ-ತಳಿರು ತೋರಣ, ದೀಪಾಲಂಕಾರದಿಂದ ಸಾರ್ವಜನಿಕರನ್ನು ಸ್ವಾಗತಿಸುತ್ತಿದೆ.
ಆಷಾಢ ಶುಕ್ರವಾರ ನಾಡ ದೇವತೆ ಚಾಮುಂಡೇಶ್ವರಿಗೆ ಮುಂಜಾನೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ಹೂವಿನ ನಡುವೆ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ಸಾರ್ವಜನಿಕರಿಗೆ ದರ್ಶನ ನೀಡಿದರು. ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಖಾಸಗಿ ವಾಹನಗಳ ಪ್ರವೇಶ ನಿರ್ಭಂಧಿಸಲಾಗಿದ್ದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ನಾಡದೇವಿಯ ದರುಶನ ಪಡೆಯಲು ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ 300ರೂ ,2 ಸಾವಿರ ಟಿಕೇಟ್ ವ್ಯವಸ್ಥೆ ಮಾಡಲಾಗಿದೆ. 2000 ಟಿಕೇಟ್ ಪಡೆದವರಿಗೆ ಲಲಿತ ಮಹಲ್ ಯಿಂದ ಬೆಟ್ಟಕ್ಕೆ ಎಸಿ ಬಸ್ ನಲ್ಲಿ ಕರೆದುಕೊಂಡು ಹೋಗಿ ಬೆಟ್ಟದಲ್ಲಿ ನೇರವಾಗಿ ದರ್ಶನ ಮಾಡಿ ನಂತರ ಪ್ರಸಾದ ರೂಪದಲ್ಲಿ ಚಾಮುಂಡೇಶ್ವರಿ ವಿಗ್ರಹ, ಲಾಡು, ಕುಡಿಯುವ ನೀರಿನ ಬಾಟಲ್, ಒಂದು ಬ್ಯಾಗ್ ವಿತರಣೆ ಮಾಡಲಾಗುತ್ತಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…