ಮೈಸೂರು : ನಗರದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಅಪರಾ ಸಂಖ್ಯೆಯಲ್ಲಿ ಸಾರ್ವಜನಿಕರು ಹರಿದು ಬರುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟ ಹೂ-ತಳಿರು ತೋರಣ, ದೀಪಾಲಂಕಾರದಿಂದ ಸಾರ್ವಜನಿಕರನ್ನು ಸ್ವಾಗತಿಸುತ್ತಿದೆ.
ಆಷಾಢ ಶುಕ್ರವಾರ ನಾಡ ದೇವತೆ ಚಾಮುಂಡೇಶ್ವರಿಗೆ ಮುಂಜಾನೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ಹೂವಿನ ನಡುವೆ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ಸಾರ್ವಜನಿಕರಿಗೆ ದರ್ಶನ ನೀಡಿದರು. ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಖಾಸಗಿ ವಾಹನಗಳ ಪ್ರವೇಶ ನಿರ್ಭಂಧಿಸಲಾಗಿದ್ದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ನಾಡದೇವಿಯ ದರುಶನ ಪಡೆಯಲು ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ 300ರೂ ,2 ಸಾವಿರ ಟಿಕೇಟ್ ವ್ಯವಸ್ಥೆ ಮಾಡಲಾಗಿದೆ. 2000 ಟಿಕೇಟ್ ಪಡೆದವರಿಗೆ ಲಲಿತ ಮಹಲ್ ಯಿಂದ ಬೆಟ್ಟಕ್ಕೆ ಎಸಿ ಬಸ್ ನಲ್ಲಿ ಕರೆದುಕೊಂಡು ಹೋಗಿ ಬೆಟ್ಟದಲ್ಲಿ ನೇರವಾಗಿ ದರ್ಶನ ಮಾಡಿ ನಂತರ ಪ್ರಸಾದ ರೂಪದಲ್ಲಿ ಚಾಮುಂಡೇಶ್ವರಿ ವಿಗ್ರಹ, ಲಾಡು, ಕುಡಿಯುವ ನೀರಿನ ಬಾಟಲ್, ಒಂದು ಬ್ಯಾಗ್ ವಿತರಣೆ ಮಾಡಲಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…