ಮೈಸೂರು : ನಗರದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಅಪರಾ ಸಂಖ್ಯೆಯಲ್ಲಿ ಸಾರ್ವಜನಿಕರು ಹರಿದು ಬರುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟ ಹೂ-ತಳಿರು ತೋರಣ, ದೀಪಾಲಂಕಾರದಿಂದ ಸಾರ್ವಜನಿಕರನ್ನು ಸ್ವಾಗತಿಸುತ್ತಿದೆ.
ಆಷಾಢ ಶುಕ್ರವಾರ ನಾಡ ದೇವತೆ ಚಾಮುಂಡೇಶ್ವರಿಗೆ ಮುಂಜಾನೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ಹೂವಿನ ನಡುವೆ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ಸಾರ್ವಜನಿಕರಿಗೆ ದರ್ಶನ ನೀಡಿದರು. ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಖಾಸಗಿ ವಾಹನಗಳ ಪ್ರವೇಶ ನಿರ್ಭಂಧಿಸಲಾಗಿದ್ದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ನಾಡದೇವಿಯ ದರುಶನ ಪಡೆಯಲು ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ 300ರೂ ,2 ಸಾವಿರ ಟಿಕೇಟ್ ವ್ಯವಸ್ಥೆ ಮಾಡಲಾಗಿದೆ. 2000 ಟಿಕೇಟ್ ಪಡೆದವರಿಗೆ ಲಲಿತ ಮಹಲ್ ಯಿಂದ ಬೆಟ್ಟಕ್ಕೆ ಎಸಿ ಬಸ್ ನಲ್ಲಿ ಕರೆದುಕೊಂಡು ಹೋಗಿ ಬೆಟ್ಟದಲ್ಲಿ ನೇರವಾಗಿ ದರ್ಶನ ಮಾಡಿ ನಂತರ ಪ್ರಸಾದ ರೂಪದಲ್ಲಿ ಚಾಮುಂಡೇಶ್ವರಿ ವಿಗ್ರಹ, ಲಾಡು, ಕುಡಿಯುವ ನೀರಿನ ಬಾಟಲ್, ಒಂದು ಬ್ಯಾಗ್ ವಿತರಣೆ ಮಾಡಲಾಗುತ್ತಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…