ಮೈಸೂರು

ಚಾಮುಂಡಿ ಬೆಟ್ಟಕ್ಕೆ ಮಾಜಿ ಸಚಿವ ಎಚ್.ಡಿ ರೇವಣ್ಣ ಭೇಟಿ

ಮೈಸೂರು : ಅಸಹಜ ಲೈಂಗಿಕ ಕ್ರಿಯೆ ಆರೋಪ ಪ್ರಕರಣದ ಪೊಲೀಸರ ” ಬಿ- ರಿಪೋರ್ಟ್” ಬೆನ್ನಲ್ಲೇ ಮೈಸೂರಿನ ಚಾಮುಂಡಿ ದರ್ಶನಕ್ಕೆ ಧಾವಿಸಿದ ಎಂಎಲ್ಸಿ ಡಾ. ಸೂರಜ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಚಾಮುಂಡಿ ಬೆಟ್ಟದ ಶುಕ್ರವಾರದ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನಾಡಿನ ಜನರಿಗೆ ಒಳಿತಾಗಲಿ. ಉತ್ತಮ ಮಳೆಯಾಗಿ ರೈತರಿಗೆ ಉತ್ತಮ ಬೆಳೆಯಾಗಲಿ ಎಂದು ಬೇಡಿಕೊಂಡಿದ್ದೇನೆ. ಎಲ್ಲರಿಗೂ ಚಾಮುಂಡೇಶ್ವರಿ ಒಳಿತು ಮಾಡಲಿ ಎಂದರು.

ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಜಿಟಿ ದೇವೇಗೌಡ ತಟಸ್ಥ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನನಗೇನು ಗೊತ್ತಿಲ್ಲ ಎಂದರು.

ರಾಜ್ಯದಲ್ಲಿ ಪವರ್ ಸೆಂಟರ್ ಜಾಸ್ತಿಯಾಗಿವೆ ಎಂಬ ರಾಜಣ್ಣ ಹೇಳಿಕೆಗೆ ಆ ಬಗ್ಗೆ ಸಮಯ ಬಂದಾಗ ಮಾತಾಡ್ತೀನಿ ಎಂದರು. ಜೆಡಿಎಸ್ ಬಿಜೆಪಿ ಸಮನ್ವಯ ಕೊರತೆ ಇದಿಯಾ ಎಂಬ ಪತ್ರಕರ್ತರ ಪ್ರಶ್ನೆಗೆ ರೇವಣ್ಣ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋದರು.

ಆಂದೋಲನ ಡೆಸ್ಕ್

Recent Posts

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

10 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

47 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

1 hour ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

1 hour ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

2 hours ago