ಮೈಸೂರು

ಲೋಕ ಚುನಾವಣೆ: ಸಂಸದ ಪ್ರತಾಪ್‌ ಸಿಂಹ ಸ್ಪರ್ಧೆ ಕುರಿತು ಅಶ್ವಥ್‌ ನಾರಾಯಣ್‌ ಹೇಳಿದ್ದಿಷ್ಟು!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸಂಸದ ಪ್ರತಾಪ್‌ ಸಿಂಹರಿಗೆ ಟಿಕೆಟ್‌ ನಿರಾಕರಣೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಈ ಕುರಿತು ಮಾಜಿ ಡಿಸಿಎಂ ಡಾ. ಅಶ್ವಥ್‌ ನಾರಾಯಣ್‌ ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯದಲ್ಲಿ ಯಾವುದು ನಿಶ್ಚಿತವಾಗಿ ಗೊತ್ತಿಲ್ಲ. ಪಕ್ಷದ ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ನಿರ್ಧರಿಸುವವರೆಗೆ ಎಲ್ಲರೂ ಕಾಯಬೇಕಾಗುತ್ತದೆ. ಪೊಲಿಟಿಕ್ಸ್‌ ತುಂಬಾ ಡೈನಾಮಿಕ್‌ ಆಗಿದ್ದು, ಸದ್ಯಕ್ಕೆ ನಾನು ಈ ಬಗ್ಗೆ ಮಾತನಾಡುವುದಿಲ್ಲ ಎಂದು ಅಶ್ವಥ್‌ ನಾರಾಯಣ್‌ ಹೇಳಿದ್ದಾರೆ.

ರಾಜಕೀಯದಲ್ಲಿ ಹೊಸ ಮುಖಕ್ಕೆ ಮಣೆ ಹಾಕುವುದು ಪಕ್ಷದಲ್ಲಿ ಸಾಮಾನ್ಯ. ಹೊಸ ಚಿಗುರು, ಹಳೆ ಬೇರು ಎಂಬುದು ನಡೆಯುತ್ತಲೇ ಇರುತ್ತದೆ. ರಾಜಕೀಯದಲ್ಲಿ ಇದೇ ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದರು.

ಜೊತಗೆ ಜಯದೇವ ಹೃದ್ರೋಗ ಸಂಸ್ಥೆ ನಿವೃತ್ತ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿದ ಡಾ. ಅಶ್ವಥ್‌ ನಾರಾಯಣ್‌, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಆಹ್ವಾನ ನೀಡಿದ್ದೇವೆ‌. ಅದರಲ್ಲಿ ಎರಡೂ ಮಾತಿಲ್ಲ. ಆದರೂ ದೊಡ್ಡವರ ಮಟ್ಟದಲ್ಲಿ ಏನು ನಿರ್ಧರಿಸುತ್ತಾರೆ ನನಗೆ ಗೊತ್ತಿಲ್ಲ. ರಾಜಕೀಯದಲ್ಲಿ ಯಾರಿಗೂ ಬಾಗಿಲು ಮುಚ್ಚುವುದಿಲ್ಲ ಎಂದು ಇದೇ ವೇಳೆ ಮಾಜಿ ಡಿಸಿಎಂ ಹೇಳಿದ್ದಾರೆ.

andolanait

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

1 hour ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

2 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

2 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

2 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

3 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

3 hours ago