ಮೈಸೂರು

ಲೋಕ ಚುನಾವಣೆ: ಸಂಸದ ಪ್ರತಾಪ್‌ ಸಿಂಹ ಸ್ಪರ್ಧೆ ಕುರಿತು ಅಶ್ವಥ್‌ ನಾರಾಯಣ್‌ ಹೇಳಿದ್ದಿಷ್ಟು!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸಂಸದ ಪ್ರತಾಪ್‌ ಸಿಂಹರಿಗೆ ಟಿಕೆಟ್‌ ನಿರಾಕರಣೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಈ ಕುರಿತು ಮಾಜಿ ಡಿಸಿಎಂ ಡಾ. ಅಶ್ವಥ್‌ ನಾರಾಯಣ್‌ ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯದಲ್ಲಿ ಯಾವುದು ನಿಶ್ಚಿತವಾಗಿ ಗೊತ್ತಿಲ್ಲ. ಪಕ್ಷದ ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ನಿರ್ಧರಿಸುವವರೆಗೆ ಎಲ್ಲರೂ ಕಾಯಬೇಕಾಗುತ್ತದೆ. ಪೊಲಿಟಿಕ್ಸ್‌ ತುಂಬಾ ಡೈನಾಮಿಕ್‌ ಆಗಿದ್ದು, ಸದ್ಯಕ್ಕೆ ನಾನು ಈ ಬಗ್ಗೆ ಮಾತನಾಡುವುದಿಲ್ಲ ಎಂದು ಅಶ್ವಥ್‌ ನಾರಾಯಣ್‌ ಹೇಳಿದ್ದಾರೆ.

ರಾಜಕೀಯದಲ್ಲಿ ಹೊಸ ಮುಖಕ್ಕೆ ಮಣೆ ಹಾಕುವುದು ಪಕ್ಷದಲ್ಲಿ ಸಾಮಾನ್ಯ. ಹೊಸ ಚಿಗುರು, ಹಳೆ ಬೇರು ಎಂಬುದು ನಡೆಯುತ್ತಲೇ ಇರುತ್ತದೆ. ರಾಜಕೀಯದಲ್ಲಿ ಇದೇ ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದರು.

ಜೊತಗೆ ಜಯದೇವ ಹೃದ್ರೋಗ ಸಂಸ್ಥೆ ನಿವೃತ್ತ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿದ ಡಾ. ಅಶ್ವಥ್‌ ನಾರಾಯಣ್‌, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಆಹ್ವಾನ ನೀಡಿದ್ದೇವೆ‌. ಅದರಲ್ಲಿ ಎರಡೂ ಮಾತಿಲ್ಲ. ಆದರೂ ದೊಡ್ಡವರ ಮಟ್ಟದಲ್ಲಿ ಏನು ನಿರ್ಧರಿಸುತ್ತಾರೆ ನನಗೆ ಗೊತ್ತಿಲ್ಲ. ರಾಜಕೀಯದಲ್ಲಿ ಯಾರಿಗೂ ಬಾಗಿಲು ಮುಚ್ಚುವುದಿಲ್ಲ ಎಂದು ಇದೇ ವೇಳೆ ಮಾಜಿ ಡಿಸಿಎಂ ಹೇಳಿದ್ದಾರೆ.

andolanait

Recent Posts

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

14 mins ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

52 mins ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

2 hours ago

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

2 hours ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

2 hours ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago