ಮೈಸೂರು: ಮೈಸೂರು ತಾಲ್ಲೂಕಿನ ಪುಟ್ಟೇಗೌಡನಹುಂಡಿ ಗ್ರಾಮದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಹಾಗು ಅರುಣೋದಯ ವಿದ್ಯಾ ಸಂಸ್ಥೆ ದೇವಲಾಪುರ ಹಾಗೂ ಪುಟ್ಟೇಗೌಡನಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಮಾತೃಶ್ರೀ ಸಂಸ್ಕೃತ ಪಾಠ ಶಾಲೆಯು ಕಾರ್ಯಕ್ರಮವನ್ನು ಆಯೋಜಿಸಿತ್ತು.
ಕಾರ್ಯಕ್ರಮದಲ್ಲಿ ಮೊದಲು ಶಾಲೆಯ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಸ್ಕೃತ ನಾಮಫಲಕಗಳೊಂದಿಗೆ ಜಾಥಾ ನಡೆಸಿದರು.
ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಕುಮುದ ಅವರು, ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ನಟರಾಜ ಬಿ.ಎಡ್.ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್ ಅವರು, ಸಂಸ್ಕೃತವು ಪ್ರಪಂಚದ ಅತ್ಯಂತ ಹಳೆಯ ಪ್ರಸಿದ್ಧ ಭಾಷೆಗಳಲ್ಲಿ ಒಂದಾಗಿದೆ. ಯಾವುದೇ ವಿಷಯವನ್ನು ಅಧ್ಯಯನ ಮಾಡಬೇಕೆಂದರೆ ಸಂಸ್ಕೃತ ಭಾಷೆ ಬೇಕು ಎಂದರು.
ಅರುಣೋದಯ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಎಂ.ಸಿದ್ದರಾಜು ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿರಂಜನ್ ಮೂರ್ತಿ, ಮಾತೃಶ್ರೀ ಸಂಸ್ಕೃತ ಪಾಠ ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ್ ಎಚ್.ಆರ್ ಸೇರಿದಂತೆ ಸಹಶಿಕ್ಷಕರುಗಳು ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…