ಮೈಸೂರು: ಮೈಸೂರು ತಾಲ್ಲೂಕಿನ ಪುಟ್ಟೇಗೌಡನಹುಂಡಿ ಗ್ರಾಮದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಹಾಗು ಅರುಣೋದಯ ವಿದ್ಯಾ ಸಂಸ್ಥೆ ದೇವಲಾಪುರ ಹಾಗೂ ಪುಟ್ಟೇಗೌಡನಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಮಾತೃಶ್ರೀ ಸಂಸ್ಕೃತ ಪಾಠ ಶಾಲೆಯು ಕಾರ್ಯಕ್ರಮವನ್ನು ಆಯೋಜಿಸಿತ್ತು.
ಕಾರ್ಯಕ್ರಮದಲ್ಲಿ ಮೊದಲು ಶಾಲೆಯ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಸ್ಕೃತ ನಾಮಫಲಕಗಳೊಂದಿಗೆ ಜಾಥಾ ನಡೆಸಿದರು.
ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಕುಮುದ ಅವರು, ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ನಟರಾಜ ಬಿ.ಎಡ್.ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್ ಅವರು, ಸಂಸ್ಕೃತವು ಪ್ರಪಂಚದ ಅತ್ಯಂತ ಹಳೆಯ ಪ್ರಸಿದ್ಧ ಭಾಷೆಗಳಲ್ಲಿ ಒಂದಾಗಿದೆ. ಯಾವುದೇ ವಿಷಯವನ್ನು ಅಧ್ಯಯನ ಮಾಡಬೇಕೆಂದರೆ ಸಂಸ್ಕೃತ ಭಾಷೆ ಬೇಕು ಎಂದರು.
ಅರುಣೋದಯ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಎಂ.ಸಿದ್ದರಾಜು ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿರಂಜನ್ ಮೂರ್ತಿ, ಮಾತೃಶ್ರೀ ಸಂಸ್ಕೃತ ಪಾಠ ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ್ ಎಚ್.ಆರ್ ಸೇರಿದಂತೆ ಸಹಶಿಕ್ಷಕರುಗಳು ಹಾಜರಿದ್ದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…