ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಡಾ. ರೇಹಾನ್ ಅಹಮದ್ ಹಲ್ಲೆಗೊಳಗಾದ ವೈದ್ಯ. ನಿನ್ನೆ 7 ವರ್ಷದ ಬಾಲಕಿ ಕೈ ಬೆರಳಿಗೆ ಪೆಟ್ಟು ಮಾಡಿಕೊಂಡಿದ್ದಳು. ಈ ಸಮಯದಲ್ಲಿ ಆ ಬಾಲಕಿಯನ್ನು ಇಬ್ಬರು ಪುರುಷರು ಹಾಗೂ ನಾಲ್ವರು ಮಹಿಳೆಯರು ಅಲ್ಅನ್ಸಾರ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ರೇಹಾನ್ ಅಹಮದ್ ಆ ಬಾಲಕಿಗೆ ಚಿಕಿತ್ಸೆ ನೀಡಿ ಮೂಳೆ ಎಕ್ಸ್ರೆಗೆ ಕಳುಹಿಸಿದ್ದಾರೆ.
ನಂತರ ಎಕ್ಸ್ ರೇ ವರದಿಯಲ್ಲಿ ಆ ಬಾಲಕಿಯ ಬೆರಳಿನ ಮೂಲೆಗೆ ಯಾವುದೇ ತೊಂದರೆ ಇಲ್ಲ ಎನ್ನುವುದು ತಿಳಿದು ಬಂದಿದೆ. ಬಾಲಕಿಗೆ ಡಾ. ರೇಹಾನ್ ಅಹಮದ್ ಚಿಕಿತ್ಸೆ ನೀಡುವ ಸಮಯದಲ್ಲಿ ಇಬ್ಬರು ಪುರುಷರು ಎಮರ್ಜೆನ್ಸಿ ವಾರ್ಡಿಗೆ ಏಕಾಏಕಿ ನುಗ್ಗಿ ವೈದ್ಯರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂದ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ವೈದ್ಯ ಡಾ. ರೇಹಾನ್ ಅಹಮದ್ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…