ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಡಾ. ರೇಹಾನ್ ಅಹಮದ್ ಹಲ್ಲೆಗೊಳಗಾದ ವೈದ್ಯ. ನಿನ್ನೆ 7 ವರ್ಷದ ಬಾಲಕಿ ಕೈ ಬೆರಳಿಗೆ ಪೆಟ್ಟು ಮಾಡಿಕೊಂಡಿದ್ದಳು. ಈ ಸಮಯದಲ್ಲಿ ಆ ಬಾಲಕಿಯನ್ನು ಇಬ್ಬರು ಪುರುಷರು ಹಾಗೂ ನಾಲ್ವರು ಮಹಿಳೆಯರು ಅಲ್ಅನ್ಸಾರ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ರೇಹಾನ್ ಅಹಮದ್ ಆ ಬಾಲಕಿಗೆ ಚಿಕಿತ್ಸೆ ನೀಡಿ ಮೂಳೆ ಎಕ್ಸ್ರೆಗೆ ಕಳುಹಿಸಿದ್ದಾರೆ.
ನಂತರ ಎಕ್ಸ್ ರೇ ವರದಿಯಲ್ಲಿ ಆ ಬಾಲಕಿಯ ಬೆರಳಿನ ಮೂಲೆಗೆ ಯಾವುದೇ ತೊಂದರೆ ಇಲ್ಲ ಎನ್ನುವುದು ತಿಳಿದು ಬಂದಿದೆ. ಬಾಲಕಿಗೆ ಡಾ. ರೇಹಾನ್ ಅಹಮದ್ ಚಿಕಿತ್ಸೆ ನೀಡುವ ಸಮಯದಲ್ಲಿ ಇಬ್ಬರು ಪುರುಷರು ಎಮರ್ಜೆನ್ಸಿ ವಾರ್ಡಿಗೆ ಏಕಾಏಕಿ ನುಗ್ಗಿ ವೈದ್ಯರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂದ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ವೈದ್ಯ ಡಾ. ರೇಹಾನ್ ಅಹಮದ್ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…