ಮೈಸೂರು: ನಂಜನಗೂಡಿನಲ್ಲಿ ಹಸುವಿನ ಬಾಲ ಕಟ್ಟು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ಗೋಭಕ್ಷಕರಿಂದಲೇ ಈ ಘಟನೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದುಗಳು ತಾಯಿ ಎಂದು ಪೂಜಿಸುವ ಗೋಮಾತೆಯ ಕೆಚ್ಚಲು ಕೊಯ್ದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ನಂಜನಗೂಡಿನಲ್ಲಿ ಗೋಮಾತೆಯ ಬಾಲ ಕಟ್ಟು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ನಾವು ಸಂಪೂರ್ಣವಾಗಿ ವಿರೋಧ ಮಾಡುತ್ತೇವೆ. ನಮ್ಮ ಮನಸ್ಸಿಗೆ ಆಗಿರುವ ನೋವನ್ನು ಪೂಜೆ ಮಾಡುವ ಮೂಲಕ ಹೊರ ಹಾಕಿದ್ದೇವೆ. ಸಿದ್ದರಾಮಯ್ಯರ ಆಡಳಿತ ಇದೇ ರೀತಿ ಮುಂದುವರಿದರೆ ಹಿಂದುಗಳ ನಂಬಿಕೆಗೆ ಧಕ್ಕೆ ಆಗುತ್ತದೆ. ಸಿದ್ದರಾಮಯ್ಯನವರ ಅವಧಿಯಲ್ಲಿ ಮುಸ್ಲಿಂ ಓಲೈಕೆ ಮಿತಿ ಮೀರಿದೆ. ಒಂದು ವೇಳೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದರೆ ಕಾಂಗ್ರೆಸ್ ಇಬ್ಭಾಗ ಆಗುತ್ತೆ ಎಂದು ಭವಿಷ್ಯ ನುಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹಸುವಿನ ಕೆಚ್ಚಲು ಕೊಯ್ದ ಆರೋಪಿಗಳ ವಿರುದ್ಧ ತನಿಖೆ ಆಗ್ಬೇಕು. ಕಠಿಣ ಶಿಕ್ಷೆ ಆಗಬೇಕು. ಹಸುವಿನ ಕೆಚ್ಚಲು ಕುಯ್ಯುವ ರೀತಿಯೇ ಆತನಿಗೂ ಶಿಕ್ಷೆ ಆಗಲಿ. ಈ ಕೂಡಲೇ ಆತನನ್ನು ಜೈಲಿಗೆ ಹಾಕಬೇಕು ಎಂದು ಆಗ್ರಹಿಸಿದರು.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…