ಮೈಸೂರು : 2022-23ನೇ ಸಾಲಿನಲ್ಲಿ ತಾಲೂಕು ವ್ಯಾಪ್ತಿ ಪ್ರಕೃತಿ ವಿಕೋಪದಿಂದ 3 ಮಾನವ ಜೀವ, 4 ಜಾನುವಾರು, 197 ಮನೆ, 39 ಕೊಟ್ಟಿಗೆ, 18 ಹೆಕ್ಟೇರ್ ಸಾಗುವಳಿ ಜಮೀನು ಹಾನಿಗೀಡಾಗಿದೆ. ಪುನರ್ ಮನೆ ನಿರ್ಮಾಣಕ್ಕಾಗಿ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗಿದೆ. ಕೆಲವು ಕುಟುಂಬಗಳ ಬಳಿ ರೇಷನ್ಕಾರ್ಡ್, ಆಧಾರ್ಕಾರ್ಡ್ ಇಲ್ಲದ ಕಾರಣ ಪುನರ್ ಮನೆ ನಿರ್ಮಾಣದ 5 ಲಕ್ಷ ರೂ. ಬಿಡುಗಡೆಗೆ ನಿರಾಕರಿಸಲಾಗಿದೆ. ಮುಂಗಾರಿನಲ್ಲಿ ವಿಪರೀತ ಮಳೆಗೆ ಮನೆ ಕಳೆದಕೊಂಡ ಕುರಿತು ಸೂಕ್ತ ಮಾಹಿತಿ ಲಭಿಸಿದ್ದರೂ ದಾಖಲೆ ಇಲ್ಲ ಎಂಬ ಕಾರಣಕ್ಕೆ ಅನೇಕ ಕುಟುಂಬಗಳು ಸರಕಾರದ ನೆರವಿನಿಂದ ವಂಚಿತಗೊಳ್ಳುವಂತಾಗಿದೆ
ಮುಂಗಾರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಂತರಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಅನೇಕ ಮನೆಗಳು ಹಾನಿಗೀಡಾಗಿವೆ. ಸಂಪೂರ್ಣ ಮನೆ ಕುಸಿದ ಕುಟುಂಬವೊಂದರ ಬಳಿ ರೇಷನ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿ ನೆರವು ನಿರಾಕರಿಸಲಾಗಿದೆ ಎಂದು ಅಂತರಸಂತೆ ಗ್ರಾ.ಪಂ.ಸದಸ್ಯ ಸುರೇಶ್ ಕೆ ಹೇಳಿದರು..
ತಂತ್ರಾಂಶದಲ್ಲಿ ಕೋರಿರುವ ಮಾಹಿತಿ ಅನ್ವಯ ರೇಷನ್ಕಾರ್ಡ್, ಆಧಾರ್ಕಾರ್ಡ್ ದಾಖಲೆ ಜೋಡಣೆ ಅನಿವಾರ್ಯ. ಕಾರ್ಡ್ ಇಲ್ಲದ ಕುಟುಂಬದ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಂಕಷ್ಟಕ್ಕೀಡಾದ ಕುಟುಂಬಕ್ಕೆ ನೆರವು ನೀಡುವ ಕ್ರಮ ಜರುಗಿಸಲಾಗುತ್ತದೆ ಎಂದು ತಹಸೀಲ್ದಾರ್ ರತ್ನಾಂಬಿಕೆ ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…