ಮೈಸೂರು : 2022-23ನೇ ಸಾಲಿನಲ್ಲಿ ತಾಲೂಕು ವ್ಯಾಪ್ತಿ ಪ್ರಕೃತಿ ವಿಕೋಪದಿಂದ 3 ಮಾನವ ಜೀವ, 4 ಜಾನುವಾರು, 197 ಮನೆ, 39 ಕೊಟ್ಟಿಗೆ, 18 ಹೆಕ್ಟೇರ್ ಸಾಗುವಳಿ ಜಮೀನು ಹಾನಿಗೀಡಾಗಿದೆ. ಪುನರ್ ಮನೆ ನಿರ್ಮಾಣಕ್ಕಾಗಿ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗಿದೆ. ಕೆಲವು ಕುಟುಂಬಗಳ ಬಳಿ ರೇಷನ್ಕಾರ್ಡ್, ಆಧಾರ್ಕಾರ್ಡ್ ಇಲ್ಲದ ಕಾರಣ ಪುನರ್ ಮನೆ ನಿರ್ಮಾಣದ 5 ಲಕ್ಷ ರೂ. ಬಿಡುಗಡೆಗೆ ನಿರಾಕರಿಸಲಾಗಿದೆ. ಮುಂಗಾರಿನಲ್ಲಿ ವಿಪರೀತ ಮಳೆಗೆ ಮನೆ ಕಳೆದಕೊಂಡ ಕುರಿತು ಸೂಕ್ತ ಮಾಹಿತಿ ಲಭಿಸಿದ್ದರೂ ದಾಖಲೆ ಇಲ್ಲ ಎಂಬ ಕಾರಣಕ್ಕೆ ಅನೇಕ ಕುಟುಂಬಗಳು ಸರಕಾರದ ನೆರವಿನಿಂದ ವಂಚಿತಗೊಳ್ಳುವಂತಾಗಿದೆ
ಮುಂಗಾರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಂತರಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಅನೇಕ ಮನೆಗಳು ಹಾನಿಗೀಡಾಗಿವೆ. ಸಂಪೂರ್ಣ ಮನೆ ಕುಸಿದ ಕುಟುಂಬವೊಂದರ ಬಳಿ ರೇಷನ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿ ನೆರವು ನಿರಾಕರಿಸಲಾಗಿದೆ ಎಂದು ಅಂತರಸಂತೆ ಗ್ರಾ.ಪಂ.ಸದಸ್ಯ ಸುರೇಶ್ ಕೆ ಹೇಳಿದರು..
ತಂತ್ರಾಂಶದಲ್ಲಿ ಕೋರಿರುವ ಮಾಹಿತಿ ಅನ್ವಯ ರೇಷನ್ಕಾರ್ಡ್, ಆಧಾರ್ಕಾರ್ಡ್ ದಾಖಲೆ ಜೋಡಣೆ ಅನಿವಾರ್ಯ. ಕಾರ್ಡ್ ಇಲ್ಲದ ಕುಟುಂಬದ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಂಕಷ್ಟಕ್ಕೀಡಾದ ಕುಟುಂಬಕ್ಕೆ ನೆರವು ನೀಡುವ ಕ್ರಮ ಜರುಗಿಸಲಾಗುತ್ತದೆ ಎಂದು ತಹಸೀಲ್ದಾರ್ ರತ್ನಾಂಬಿಕೆ ತಿಳಿಸಿದರು.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…