ಮೈಸೂರು

ರೇಷನ್‌ಕಾರ್ಡ್‌ ಇಲ್ಲದ್ದಕ್ಕೆ ಸಿಗದ ನೆರವು ! ಪರಾದಾಡಿದ ಬಡ ಫಲಾನುಭವಿಗಳು

ಮೈಸೂರು : 2022-23ನೇ ಸಾಲಿನಲ್ಲಿ ತಾಲೂಕು ವ್ಯಾಪ್ತಿ ಪ್ರಕೃತಿ ವಿಕೋಪದಿಂದ 3 ಮಾನವ ಜೀವ, 4 ಜಾನುವಾರು, 197 ಮನೆ, 39 ಕೊಟ್ಟಿಗೆ, 18 ಹೆಕ್ಟೇರ್‌ ಸಾಗುವಳಿ ಜಮೀನು ಹಾನಿಗೀಡಾಗಿದೆ. ಪುನರ್‌ ಮನೆ ನಿರ್ಮಾಣಕ್ಕಾಗಿ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗಿದೆ. ಕೆಲವು ಕುಟುಂಬಗಳ ಬಳಿ ರೇಷನ್‌ಕಾರ್ಡ್‌, ಆಧಾರ್‌ಕಾರ್ಡ್‌ ಇಲ್ಲದ ಕಾರಣ ಪುನರ್‌ ಮನೆ ನಿರ್ಮಾಣದ 5 ಲಕ್ಷ ರೂ. ಬಿಡುಗಡೆಗೆ ನಿರಾಕರಿಸಲಾಗಿದೆ. ಮುಂಗಾರಿನಲ್ಲಿ ವಿಪರೀತ ಮಳೆಗೆ ಮನೆ ಕಳೆದಕೊಂಡ ಕುರಿತು ಸೂಕ್ತ ಮಾಹಿತಿ ಲಭಿಸಿದ್ದರೂ ದಾಖಲೆ ಇಲ್ಲ ಎಂಬ ಕಾರಣಕ್ಕೆ ಅನೇಕ ಕುಟುಂಬಗಳು ಸರಕಾರದ ನೆರವಿನಿಂದ ವಂಚಿತಗೊಳ್ಳುವಂತಾಗಿದೆ

ಮುಂಗಾರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಂತರಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಅನೇಕ ಮನೆಗಳು ಹಾನಿಗೀಡಾಗಿವೆ. ಸಂಪೂರ್ಣ ಮನೆ ಕುಸಿದ ಕುಟುಂಬವೊಂದರ ಬಳಿ ರೇಷನ್‌ ಕಾರ್ಡ್‌ ಇಲ್ಲ ಎಂಬ ಕಾರಣಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿ ನೆರವು ನಿರಾಕರಿಸಲಾಗಿದೆ ಎಂದು ಅಂತರಸಂತೆ ಗ್ರಾ.ಪಂ.ಸದಸ್ಯ ಸುರೇಶ್‌  ಕೆ ಹೇಳಿದರು..

ತಂತ್ರಾಂಶದಲ್ಲಿ ಕೋರಿರುವ ಮಾಹಿತಿ ಅನ್ವಯ ರೇಷನ್‌ಕಾರ್ಡ್‌, ಆಧಾರ್‌ಕಾರ್ಡ್‌ ದಾಖಲೆ ಜೋಡಣೆ ಅನಿವಾರ್ಯ. ಕಾರ್ಡ್‌ ಇಲ್ಲದ ಕುಟುಂಬದ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಂಕಷ್ಟಕ್ಕೀಡಾದ ಕುಟುಂಬಕ್ಕೆ ನೆರವು ನೀಡುವ ಕ್ರಮ ಜರುಗಿಸಲಾಗುತ್ತದೆ ಎಂದು ತಹಸೀಲ್ದಾರ್ ರತ್ನಾಂಬಿಕೆ ತಿಳಿಸಿದರು.

 

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

35 mins ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

43 mins ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

2 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

3 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

7 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

7 hours ago