ಮೈಸೂರು : 2022-23ನೇ ಸಾಲಿನಲ್ಲಿ ತಾಲೂಕು ವ್ಯಾಪ್ತಿ ಪ್ರಕೃತಿ ವಿಕೋಪದಿಂದ 3 ಮಾನವ ಜೀವ, 4 ಜಾನುವಾರು, 197 ಮನೆ, 39 ಕೊಟ್ಟಿಗೆ, 18 ಹೆಕ್ಟೇರ್ ಸಾಗುವಳಿ ಜಮೀನು ಹಾನಿಗೀಡಾಗಿದೆ. ಪುನರ್ ಮನೆ ನಿರ್ಮಾಣಕ್ಕಾಗಿ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗಿದೆ. ಕೆಲವು ಕುಟುಂಬಗಳ ಬಳಿ ರೇಷನ್ಕಾರ್ಡ್, ಆಧಾರ್ಕಾರ್ಡ್ ಇಲ್ಲದ ಕಾರಣ ಪುನರ್ ಮನೆ ನಿರ್ಮಾಣದ 5 ಲಕ್ಷ ರೂ. ಬಿಡುಗಡೆಗೆ ನಿರಾಕರಿಸಲಾಗಿದೆ. ಮುಂಗಾರಿನಲ್ಲಿ ವಿಪರೀತ ಮಳೆಗೆ ಮನೆ ಕಳೆದಕೊಂಡ ಕುರಿತು ಸೂಕ್ತ ಮಾಹಿತಿ ಲಭಿಸಿದ್ದರೂ ದಾಖಲೆ ಇಲ್ಲ ಎಂಬ ಕಾರಣಕ್ಕೆ ಅನೇಕ ಕುಟುಂಬಗಳು ಸರಕಾರದ ನೆರವಿನಿಂದ ವಂಚಿತಗೊಳ್ಳುವಂತಾಗಿದೆ
ಮುಂಗಾರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಂತರಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಅನೇಕ ಮನೆಗಳು ಹಾನಿಗೀಡಾಗಿವೆ. ಸಂಪೂರ್ಣ ಮನೆ ಕುಸಿದ ಕುಟುಂಬವೊಂದರ ಬಳಿ ರೇಷನ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿ ನೆರವು ನಿರಾಕರಿಸಲಾಗಿದೆ ಎಂದು ಅಂತರಸಂತೆ ಗ್ರಾ.ಪಂ.ಸದಸ್ಯ ಸುರೇಶ್ ಕೆ ಹೇಳಿದರು..
ತಂತ್ರಾಂಶದಲ್ಲಿ ಕೋರಿರುವ ಮಾಹಿತಿ ಅನ್ವಯ ರೇಷನ್ಕಾರ್ಡ್, ಆಧಾರ್ಕಾರ್ಡ್ ದಾಖಲೆ ಜೋಡಣೆ ಅನಿವಾರ್ಯ. ಕಾರ್ಡ್ ಇಲ್ಲದ ಕುಟುಂಬದ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಂಕಷ್ಟಕ್ಕೀಡಾದ ಕುಟುಂಬಕ್ಕೆ ನೆರವು ನೀಡುವ ಕ್ರಮ ಜರುಗಿಸಲಾಗುತ್ತದೆ ಎಂದು ತಹಸೀಲ್ದಾರ್ ರತ್ನಾಂಬಿಕೆ ತಿಳಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…