ಮೈಸೂರು

ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು : ನಿವೃತ್ತ ಸೈನಿಕ ಅಂಥೋಣಿ ಜಾರ್ಜ್ ಕರೆ

ಮೈಸೂರು : ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು ಎಂದು ನಿವೃತ್ತ ಸೈನಿಕ ಅಂಥೋಣಿ ಜಾರ್ಜ್ ಕರೆ ನೀಡಿದರು.

ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೈಸೂರು ಹಾಗೂ ಎನ್ ಆರ್ ಮೊಹಲ್ಲಾದ ಸೇಂಟ್ ಆನ್ಸ್ ಶಾಲೆಯ ಸಹಯೋಗದೊಂದಿಗೆ ಆಯೋಜಿಸಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೇನೆ ಎಂದರೆ ಸೈನಿಕ ಮಾತ್ರ ಅಲ್ಲ ಹಲವು ವಿಭಾಗಗಳಲ್ಲಿ ಉನ್ನತ ಹುದ್ದೆ ಅಲಂಕರಿಸಬಹುದು ಎಂದರು. ಈ ಸಂದರ್ಭದಲ್ಲಿ ಸೇನೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕ ಅಂಥೋಣಿ ಜಾರ್ಜ್ ಅವರನ್ನು ಗೌರವಿಸಲಾಯಿತು.

ಪ್ರಾಸ್ತವಿಕವಾಗಿ ಮಾತನಾಡಿದ ಕ್ಷೇತ್ರ ಪ್ರಚಾರಾಧಿಕಾರಿ ಶ್ರುತಿ ಎಸ್ ಟಿ ದೇಶಭಕ್ತಿಯನ್ನು ಹೆಚ್ಚಿಸುವ ಇಂತಹ ವಿವಿಧ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು. ಭಾರತ ಸೇವಾದಳದ ಸಂಪನ್ಮೂಲ ವ್ಯಕ್ತಿ ಶೇಷಾಚಲ ಮಾತನಾಡಿ ರಾಷ್ಟ್ರಧ್ವಜದ ಮಹತ್ವ ಸಾರಿದರು.

ಸೇಂಟ್ ಆನ್ಸ್ ಶಾಲೆಯ ವ್ಯವಸ್ಥಾಪಕರಾದ ಸಿಸ್ಟರ್ ಆನೆಟ್, ಪ್ರಾಂಶುಪಾಲರಾದ ಸಿಸ್ಟರ್ ಲಿಲ್ಲಿ ಪೀಟರ್, ಸಿಸ್ಟರ್ ಹೆಲೆನ ಜೋಸೆಫ್, ಸಿಸ್ಟರ್ ಮ್ಯಾರಿಯಟ್ ಉಪಸ್ಥಿತರಿದ್ದರು. ಏಕ ಭಾರತ ಶ್ರೇಷ್ಠ ಭಾರತ ಛದ್ಮವೇಶ ಸ್ಪರ್ಧೆ, ಸ್ವಾತಂತ್ರ್ಯ ದಿನ ಕುರಿತು ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳು ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅರುಣೋದಯ ಜಾನಪದ ಕಲಾತಂಡ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಪ್ರಚಾರ ಸಹಾಯಕ ದರ್ಶನ್, ಶಾಲಾ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

20 mins ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

30 mins ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

43 mins ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

2 hours ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

3 hours ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

4 hours ago