ಮೈಸೂರು

ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು : ನಿವೃತ್ತ ಸೈನಿಕ ಅಂಥೋಣಿ ಜಾರ್ಜ್ ಕರೆ

ಮೈಸೂರು : ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು ಎಂದು ನಿವೃತ್ತ ಸೈನಿಕ ಅಂಥೋಣಿ ಜಾರ್ಜ್ ಕರೆ ನೀಡಿದರು.

ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೈಸೂರು ಹಾಗೂ ಎನ್ ಆರ್ ಮೊಹಲ್ಲಾದ ಸೇಂಟ್ ಆನ್ಸ್ ಶಾಲೆಯ ಸಹಯೋಗದೊಂದಿಗೆ ಆಯೋಜಿಸಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೇನೆ ಎಂದರೆ ಸೈನಿಕ ಮಾತ್ರ ಅಲ್ಲ ಹಲವು ವಿಭಾಗಗಳಲ್ಲಿ ಉನ್ನತ ಹುದ್ದೆ ಅಲಂಕರಿಸಬಹುದು ಎಂದರು. ಈ ಸಂದರ್ಭದಲ್ಲಿ ಸೇನೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕ ಅಂಥೋಣಿ ಜಾರ್ಜ್ ಅವರನ್ನು ಗೌರವಿಸಲಾಯಿತು.

ಪ್ರಾಸ್ತವಿಕವಾಗಿ ಮಾತನಾಡಿದ ಕ್ಷೇತ್ರ ಪ್ರಚಾರಾಧಿಕಾರಿ ಶ್ರುತಿ ಎಸ್ ಟಿ ದೇಶಭಕ್ತಿಯನ್ನು ಹೆಚ್ಚಿಸುವ ಇಂತಹ ವಿವಿಧ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು. ಭಾರತ ಸೇವಾದಳದ ಸಂಪನ್ಮೂಲ ವ್ಯಕ್ತಿ ಶೇಷಾಚಲ ಮಾತನಾಡಿ ರಾಷ್ಟ್ರಧ್ವಜದ ಮಹತ್ವ ಸಾರಿದರು.

ಸೇಂಟ್ ಆನ್ಸ್ ಶಾಲೆಯ ವ್ಯವಸ್ಥಾಪಕರಾದ ಸಿಸ್ಟರ್ ಆನೆಟ್, ಪ್ರಾಂಶುಪಾಲರಾದ ಸಿಸ್ಟರ್ ಲಿಲ್ಲಿ ಪೀಟರ್, ಸಿಸ್ಟರ್ ಹೆಲೆನ ಜೋಸೆಫ್, ಸಿಸ್ಟರ್ ಮ್ಯಾರಿಯಟ್ ಉಪಸ್ಥಿತರಿದ್ದರು. ಏಕ ಭಾರತ ಶ್ರೇಷ್ಠ ಭಾರತ ಛದ್ಮವೇಶ ಸ್ಪರ್ಧೆ, ಸ್ವಾತಂತ್ರ್ಯ ದಿನ ಕುರಿತು ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳು ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅರುಣೋದಯ ಜಾನಪದ ಕಲಾತಂಡ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಪ್ರಚಾರ ಸಹಾಯಕ ದರ್ಶನ್, ಶಾಲಾ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

10 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

11 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

12 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

13 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

13 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

14 hours ago