ಮೈಸೂರು

ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು : ನಿವೃತ್ತ ಸೈನಿಕ ಅಂಥೋಣಿ ಜಾರ್ಜ್ ಕರೆ

ಮೈಸೂರು : ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು ಎಂದು ನಿವೃತ್ತ ಸೈನಿಕ ಅಂಥೋಣಿ ಜಾರ್ಜ್ ಕರೆ ನೀಡಿದರು.

ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೈಸೂರು ಹಾಗೂ ಎನ್ ಆರ್ ಮೊಹಲ್ಲಾದ ಸೇಂಟ್ ಆನ್ಸ್ ಶಾಲೆಯ ಸಹಯೋಗದೊಂದಿಗೆ ಆಯೋಜಿಸಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೇನೆ ಎಂದರೆ ಸೈನಿಕ ಮಾತ್ರ ಅಲ್ಲ ಹಲವು ವಿಭಾಗಗಳಲ್ಲಿ ಉನ್ನತ ಹುದ್ದೆ ಅಲಂಕರಿಸಬಹುದು ಎಂದರು. ಈ ಸಂದರ್ಭದಲ್ಲಿ ಸೇನೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕ ಅಂಥೋಣಿ ಜಾರ್ಜ್ ಅವರನ್ನು ಗೌರವಿಸಲಾಯಿತು.

ಪ್ರಾಸ್ತವಿಕವಾಗಿ ಮಾತನಾಡಿದ ಕ್ಷೇತ್ರ ಪ್ರಚಾರಾಧಿಕಾರಿ ಶ್ರುತಿ ಎಸ್ ಟಿ ದೇಶಭಕ್ತಿಯನ್ನು ಹೆಚ್ಚಿಸುವ ಇಂತಹ ವಿವಿಧ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು. ಭಾರತ ಸೇವಾದಳದ ಸಂಪನ್ಮೂಲ ವ್ಯಕ್ತಿ ಶೇಷಾಚಲ ಮಾತನಾಡಿ ರಾಷ್ಟ್ರಧ್ವಜದ ಮಹತ್ವ ಸಾರಿದರು.

ಸೇಂಟ್ ಆನ್ಸ್ ಶಾಲೆಯ ವ್ಯವಸ್ಥಾಪಕರಾದ ಸಿಸ್ಟರ್ ಆನೆಟ್, ಪ್ರಾಂಶುಪಾಲರಾದ ಸಿಸ್ಟರ್ ಲಿಲ್ಲಿ ಪೀಟರ್, ಸಿಸ್ಟರ್ ಹೆಲೆನ ಜೋಸೆಫ್, ಸಿಸ್ಟರ್ ಮ್ಯಾರಿಯಟ್ ಉಪಸ್ಥಿತರಿದ್ದರು. ಏಕ ಭಾರತ ಶ್ರೇಷ್ಠ ಭಾರತ ಛದ್ಮವೇಶ ಸ್ಪರ್ಧೆ, ಸ್ವಾತಂತ್ರ್ಯ ದಿನ ಕುರಿತು ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳು ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅರುಣೋದಯ ಜಾನಪದ ಕಲಾತಂಡ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಪ್ರಚಾರ ಸಹಾಯಕ ದರ್ಶನ್, ಶಾಲಾ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

3 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

3 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

3 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

3 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

3 hours ago