ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ ಎಂದು ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ವಿರೋಧ ಪಕ್ಷಗಳು ಸುಳ್ಳು ಆರೋಪಗಳ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮುಖ್ಯ ಟಾರ್ಗೆಟ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಅದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಡ್ಡಗಾಲಾಗಿ ಇರುವುದರಿಂದ ಮೊದಲು ಅವರನ್ನು ಮುಗಿಸಲು ಇಲ್ಲಸಲ್ಲದ ಆರೋಪಗಳ ಮಾಡಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಜನಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಸ್ನೇಹಿ ಆಗಿರುವ, ಜನರಿಂದ ರಚನೆ ಆಗಿರುವ ಕಾಂಗ್ರೆಸ್ ಸರ್ಕಾರವನ್ನು ಹೇಗಾದರು ಮುಗಿಸುವ ಮೂಲಕ ಅಧಿಕಾರಕ್ಕೆ ಬರಬೇಕು ಎನ್ನುವುದು ಬಿಜೆಪಿಯ ಕುತಂತ್ರ. ಸಿಎಂ ತಪ್ಪು ಮಾಡದಿದ್ರು ತನಿಖಾ ಸಂಸ್ಥೆಗಳನ್ನು ದೂರುಪಯೋಗಪಡಿಸಿಕೊಂಡು ಸಿದ್ದರಾಮಯ್ಯ ರಾಜೀನಾಮೆಗೆ ಯತ್ನಿಸುತ್ತಿವೆ ಎಂದರು.
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…