ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಾಟಾ ಎಸಿ ಗೂಡ್ಸ್ ಗಾಡಿಯ ಚಾಲಕ ನಾಗಣಾಪುರದ ಶಿವಕುಮಾರ್ ತನಗೆ ಸಾಲ ನೀಡಿದ ಮಹದೇವನಗರದ ರವಿ ಮನೆ ಮುಂದೆ ಆತ್ನಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ
ಮಹದೇವನಗರದ ರವಿಗೆ ಶಿವಕುಮಾರ್ 5 ಸಾವಿರ ಸಾಲ ನೀಡಬೇಕಿತ್ತು. ಹಣ ಹಿಂದಿರುಗಿಸಲು ಶಿವಕುಮಾರ್ ಸಮಯ ಕೇಳಿದ್ದ.ಆದರೆ ರವಿ ಆಗಾಗ ಹಣಕ್ಕಾಗಿ ಪೀಡಿಸುತ್ತಿದ್ದ. ಭಾನುವಾರ ಮಧ್ಯಾಹ್ನ ಶಿವಕುಮಾರ್ ತನ್ನ ಸ್ನೇಹಿತನ ಸ್ಕೂಟರ್ ತಂದು ಯಡಿಯಾಲ ಬಸ್ ಸ್ಟಾಪ್ ಬಳಿ ನಿಂತಿದ್ದ.ಅಲ್ಲಿಗೆ ಬಂದ ರವಿ ಹಣಕ್ಕಾಗಿ ಪೀಡಿಸಿ ಹಲ್ಲೆ ಮಾಡಿದ್ದಾನೆ. ಅಲ್ಲದೆ ಸ್ನೇಹಿತನಿಂದ ತಂದಿದ್ದ ಸ್ಕೂಟರ್ ಬಲವಂತವಾಗಿ ಕಿತ್ತುಕೊಂಡು ಹೋಗಿದ್ದಾನೆ. ಇದರಿಂದ ಮನನೊಂದ ಶಿವಕುಮಾರ್ ಜಮೀನಿಗೆ ಸಿಂಪಡಿಸುವ ಔಷಧಿಯೊಂದಿಗೆ ರವಿ ಮನೆ ಮುಂದೆ ಬಂದು ತನ್ನ ಸಾವಿಗೆ ರವಿ ಕಾರಣ ಎಂದು ಹೇಳಿ ಸೆಲ್ಪಿ ವಿಡಿಯೋ ಮಾಡಿ ಅದನ್ನು ಜಾಲತಾಣಕ್ಕೆ ಹರಿಬಿಟ್ಟು ವಿಷ ಸೇವಿಸಿದ್ದಾನೆ.
ವಿಷಕುಡಿದು ಅಸ್ವಸ್ಥನಾಗಿದ್ದ ಶಿವಕುಮಾರ್ ನನ್ನು ಸರಗೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…