ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಾಟಾ ಎಸಿ ಗೂಡ್ಸ್ ಗಾಡಿಯ ಚಾಲಕ ನಾಗಣಾಪುರದ ಶಿವಕುಮಾರ್ ತನಗೆ ಸಾಲ ನೀಡಿದ ಮಹದೇವನಗರದ ರವಿ ಮನೆ ಮುಂದೆ ಆತ್ನಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ
ಮಹದೇವನಗರದ ರವಿಗೆ ಶಿವಕುಮಾರ್ 5 ಸಾವಿರ ಸಾಲ ನೀಡಬೇಕಿತ್ತು. ಹಣ ಹಿಂದಿರುಗಿಸಲು ಶಿವಕುಮಾರ್ ಸಮಯ ಕೇಳಿದ್ದ.ಆದರೆ ರವಿ ಆಗಾಗ ಹಣಕ್ಕಾಗಿ ಪೀಡಿಸುತ್ತಿದ್ದ. ಭಾನುವಾರ ಮಧ್ಯಾಹ್ನ ಶಿವಕುಮಾರ್ ತನ್ನ ಸ್ನೇಹಿತನ ಸ್ಕೂಟರ್ ತಂದು ಯಡಿಯಾಲ ಬಸ್ ಸ್ಟಾಪ್ ಬಳಿ ನಿಂತಿದ್ದ.ಅಲ್ಲಿಗೆ ಬಂದ ರವಿ ಹಣಕ್ಕಾಗಿ ಪೀಡಿಸಿ ಹಲ್ಲೆ ಮಾಡಿದ್ದಾನೆ. ಅಲ್ಲದೆ ಸ್ನೇಹಿತನಿಂದ ತಂದಿದ್ದ ಸ್ಕೂಟರ್ ಬಲವಂತವಾಗಿ ಕಿತ್ತುಕೊಂಡು ಹೋಗಿದ್ದಾನೆ. ಇದರಿಂದ ಮನನೊಂದ ಶಿವಕುಮಾರ್ ಜಮೀನಿಗೆ ಸಿಂಪಡಿಸುವ ಔಷಧಿಯೊಂದಿಗೆ ರವಿ ಮನೆ ಮುಂದೆ ಬಂದು ತನ್ನ ಸಾವಿಗೆ ರವಿ ಕಾರಣ ಎಂದು ಹೇಳಿ ಸೆಲ್ಪಿ ವಿಡಿಯೋ ಮಾಡಿ ಅದನ್ನು ಜಾಲತಾಣಕ್ಕೆ ಹರಿಬಿಟ್ಟು ವಿಷ ಸೇವಿಸಿದ್ದಾನೆ.
ವಿಷಕುಡಿದು ಅಸ್ವಸ್ಥನಾಗಿದ್ದ ಶಿವಕುಮಾರ್ ನನ್ನು ಸರಗೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…