ಮೈಸೂರು

ನಾಳಿನ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ನೀಡಿದ ಆಟೋ ಚಾಲಕರು, ಖಾಸಗಿ ಬಸ್ ಚಾಲಕರು

ಮೈಸೂರು: ಕನ್ನಡ ಪರ ಸಂಘಟನೆಗಳಿಂದ ಎಂಇಎಸ್‌ ನಿಷೇಧಿಸುವಂತೆ ನಾಳೆ ಕರ್ನಾಟಕ ಬಂದ್‌ ಆಚರಣೆಗೆ ಖಾಸಗಿ ಬಸ್ ಚಾಲಕರು ಮತ್ತು ಆಟೋ ಚಾಲಕರು ನೈತಿಕ ಬೆಂಬಲ ಸೂಚಿಸಿದ್ದಾರೆ.

ನಗರದಲ್ಲಿ ಇಂದು(ಮಾರ್ಚ್‌.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆಟೋ ಚಾಲಕರು, ನಾಡಿಗಾಗಿ ಒಂದು ದಿನದ ಕೂಲಿ ಬಿಡಲು ಸಿದ್ಧರಿದ್ದೇವೆ. ಮಹಾರಾಷ್ಟ್ರದಲ್ಲಿ ನಮ್ಮ ಬಸ್ ಚಾಲಕನಿಗೆ ಹೊಡೆದಿರುವುದು ಅನ್ಯಾಯ. ನಾಳೆ ನಮಗೂ ಅದೇ ಪರಿಸ್ಥಿತಿ ಬರಬಹುದು. ಆದ್ದರಿಂದ ನಾಡಿಗಾಗಿ ನಾವು ಕನ್ನಡ ಪರ ಹೋರಾಟಕ್ಕೆ ಸಾಥ್ ನೀಡುತ್ತೇವೆ. ಒಂದು ದಿನದ ಕೂಲಿಗಾಗಿ ಗೌರವ ಕಳೆದುಕೊಳ್ಳಬಾರದು.
ನಮಗಾಗಿ ಹಾಗೂ ನಾಡಿಗಾಗಿ ಒಂದು ದಿನ ಕೆಲಸ ಮಾಡದಿದ್ದರೆ ಏನು ಸಮಸ್ಯೆ ಆಗೋದಿಲ್ಲ ಎಂದು ಹೇಳಿದ್ದಾರೆ.

ನಾಳಿನ ಬಂದ್‌ಗೆ ಖಾಸಗಿ ಬಸ್ ಚಾಲಕರು

ನಾಳಿನ ಕರ್ನಾಟಕ ಬಂದ್‌ ಬಗ್ಗೆ ಖಾಸಗಿ ಬಸ್ ಚಾಲಕ ಸಂಘದ ಕಾರ್ಯದರ್ಶಿ ದಯಾನಂದಸ್ವಾಮಿ ಮಾತನಾಡಿ, ಖಾಸಗಿ ಬಸ್ ಮಾಲೀಕರ ಸಂಘದಿಂದ ನೈತಿಕ ಕೇವಲ ಬೆಂಬಲವಿರುತ್ತದೆ. ಆದರೆ ಎಂದಿನಂತೆ ಖಾಸಗಿ ಬಸ್ ಸಂಚಾರ ಇರುತ್ತೆ. ಈಗಾಗಲೇ ಫ್ರೀ ಸ್ಕೀಂ ನಿಂದ ಖಾಸಗಿ ಸಾರಿಗೆ ಬಸ್ ಉದ್ಯಮ ಬಹಳ ಸಂಕಷ್ಟದಲ್ಲಿದೆ. ಅಲ್ಲದೇ ಒಂದು ಬಸ್ ನಿಲ್ಲಿಸಿದರೆ ನಮ್ಮ ನೌಕರರ ಜೀವನಕ್ಕೆ ತೊಂದರೆ ಆಗುತ್ತದೆ ಎಂದರು.

ಇನ್ನು ನಾಡು ನುಡಿ ಜಲ ವಿಚಾರಕ್ಕೆ ನಾವು ಬದ್ದರಿದ್ದೇವೆ. ಸಂಘಟನೆಯ ಪ್ರಮುಖರು ಪ್ರತಿಭಟನೆಯಲ್ಲೂ ಭಾಗಿಯುತ್ತೇವೆ. ಆದರೆ ಬಸ್ ನಿಲ್ಲಿಸಿ ನೌಕರರಿಗೆ ತೊಂದರೆ ನೀಡಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರಗ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

9 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

23 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

35 mins ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

46 mins ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

58 mins ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

1 hour ago