ಮೈಸೂರು

ನಾಳಿನ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ನೀಡಿದ ಆಟೋ ಚಾಲಕರು, ಖಾಸಗಿ ಬಸ್ ಚಾಲಕರು

ಮೈಸೂರು: ಕನ್ನಡ ಪರ ಸಂಘಟನೆಗಳಿಂದ ಎಂಇಎಸ್‌ ನಿಷೇಧಿಸುವಂತೆ ನಾಳೆ ಕರ್ನಾಟಕ ಬಂದ್‌ ಆಚರಣೆಗೆ ಖಾಸಗಿ ಬಸ್ ಚಾಲಕರು ಮತ್ತು ಆಟೋ ಚಾಲಕರು ನೈತಿಕ ಬೆಂಬಲ ಸೂಚಿಸಿದ್ದಾರೆ.

ನಗರದಲ್ಲಿ ಇಂದು(ಮಾರ್ಚ್‌.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆಟೋ ಚಾಲಕರು, ನಾಡಿಗಾಗಿ ಒಂದು ದಿನದ ಕೂಲಿ ಬಿಡಲು ಸಿದ್ಧರಿದ್ದೇವೆ. ಮಹಾರಾಷ್ಟ್ರದಲ್ಲಿ ನಮ್ಮ ಬಸ್ ಚಾಲಕನಿಗೆ ಹೊಡೆದಿರುವುದು ಅನ್ಯಾಯ. ನಾಳೆ ನಮಗೂ ಅದೇ ಪರಿಸ್ಥಿತಿ ಬರಬಹುದು. ಆದ್ದರಿಂದ ನಾಡಿಗಾಗಿ ನಾವು ಕನ್ನಡ ಪರ ಹೋರಾಟಕ್ಕೆ ಸಾಥ್ ನೀಡುತ್ತೇವೆ. ಒಂದು ದಿನದ ಕೂಲಿಗಾಗಿ ಗೌರವ ಕಳೆದುಕೊಳ್ಳಬಾರದು.
ನಮಗಾಗಿ ಹಾಗೂ ನಾಡಿಗಾಗಿ ಒಂದು ದಿನ ಕೆಲಸ ಮಾಡದಿದ್ದರೆ ಏನು ಸಮಸ್ಯೆ ಆಗೋದಿಲ್ಲ ಎಂದು ಹೇಳಿದ್ದಾರೆ.

ನಾಳಿನ ಬಂದ್‌ಗೆ ಖಾಸಗಿ ಬಸ್ ಚಾಲಕರು

ನಾಳಿನ ಕರ್ನಾಟಕ ಬಂದ್‌ ಬಗ್ಗೆ ಖಾಸಗಿ ಬಸ್ ಚಾಲಕ ಸಂಘದ ಕಾರ್ಯದರ್ಶಿ ದಯಾನಂದಸ್ವಾಮಿ ಮಾತನಾಡಿ, ಖಾಸಗಿ ಬಸ್ ಮಾಲೀಕರ ಸಂಘದಿಂದ ನೈತಿಕ ಕೇವಲ ಬೆಂಬಲವಿರುತ್ತದೆ. ಆದರೆ ಎಂದಿನಂತೆ ಖಾಸಗಿ ಬಸ್ ಸಂಚಾರ ಇರುತ್ತೆ. ಈಗಾಗಲೇ ಫ್ರೀ ಸ್ಕೀಂ ನಿಂದ ಖಾಸಗಿ ಸಾರಿಗೆ ಬಸ್ ಉದ್ಯಮ ಬಹಳ ಸಂಕಷ್ಟದಲ್ಲಿದೆ. ಅಲ್ಲದೇ ಒಂದು ಬಸ್ ನಿಲ್ಲಿಸಿದರೆ ನಮ್ಮ ನೌಕರರ ಜೀವನಕ್ಕೆ ತೊಂದರೆ ಆಗುತ್ತದೆ ಎಂದರು.

ಇನ್ನು ನಾಡು ನುಡಿ ಜಲ ವಿಚಾರಕ್ಕೆ ನಾವು ಬದ್ದರಿದ್ದೇವೆ. ಸಂಘಟನೆಯ ಪ್ರಮುಖರು ಪ್ರತಿಭಟನೆಯಲ್ಲೂ ಭಾಗಿಯುತ್ತೇವೆ. ಆದರೆ ಬಸ್ ನಿಲ್ಲಿಸಿ ನೌಕರರಿಗೆ ತೊಂದರೆ ನೀಡಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

11 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

17 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

28 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

1 hour ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

1 hour ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

2 hours ago