ಮೈಸೂರು

ನಾಳಿನ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ನೀಡಿದ ಆಟೋ ಚಾಲಕರು, ಖಾಸಗಿ ಬಸ್ ಚಾಲಕರು

ಮೈಸೂರು: ಕನ್ನಡ ಪರ ಸಂಘಟನೆಗಳಿಂದ ಎಂಇಎಸ್‌ ನಿಷೇಧಿಸುವಂತೆ ನಾಳೆ ಕರ್ನಾಟಕ ಬಂದ್‌ ಆಚರಣೆಗೆ ಖಾಸಗಿ ಬಸ್ ಚಾಲಕರು ಮತ್ತು ಆಟೋ ಚಾಲಕರು ನೈತಿಕ ಬೆಂಬಲ ಸೂಚಿಸಿದ್ದಾರೆ.

ನಗರದಲ್ಲಿ ಇಂದು(ಮಾರ್ಚ್‌.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆಟೋ ಚಾಲಕರು, ನಾಡಿಗಾಗಿ ಒಂದು ದಿನದ ಕೂಲಿ ಬಿಡಲು ಸಿದ್ಧರಿದ್ದೇವೆ. ಮಹಾರಾಷ್ಟ್ರದಲ್ಲಿ ನಮ್ಮ ಬಸ್ ಚಾಲಕನಿಗೆ ಹೊಡೆದಿರುವುದು ಅನ್ಯಾಯ. ನಾಳೆ ನಮಗೂ ಅದೇ ಪರಿಸ್ಥಿತಿ ಬರಬಹುದು. ಆದ್ದರಿಂದ ನಾಡಿಗಾಗಿ ನಾವು ಕನ್ನಡ ಪರ ಹೋರಾಟಕ್ಕೆ ಸಾಥ್ ನೀಡುತ್ತೇವೆ. ಒಂದು ದಿನದ ಕೂಲಿಗಾಗಿ ಗೌರವ ಕಳೆದುಕೊಳ್ಳಬಾರದು.
ನಮಗಾಗಿ ಹಾಗೂ ನಾಡಿಗಾಗಿ ಒಂದು ದಿನ ಕೆಲಸ ಮಾಡದಿದ್ದರೆ ಏನು ಸಮಸ್ಯೆ ಆಗೋದಿಲ್ಲ ಎಂದು ಹೇಳಿದ್ದಾರೆ.

ನಾಳಿನ ಬಂದ್‌ಗೆ ಖಾಸಗಿ ಬಸ್ ಚಾಲಕರು

ನಾಳಿನ ಕರ್ನಾಟಕ ಬಂದ್‌ ಬಗ್ಗೆ ಖಾಸಗಿ ಬಸ್ ಚಾಲಕ ಸಂಘದ ಕಾರ್ಯದರ್ಶಿ ದಯಾನಂದಸ್ವಾಮಿ ಮಾತನಾಡಿ, ಖಾಸಗಿ ಬಸ್ ಮಾಲೀಕರ ಸಂಘದಿಂದ ನೈತಿಕ ಕೇವಲ ಬೆಂಬಲವಿರುತ್ತದೆ. ಆದರೆ ಎಂದಿನಂತೆ ಖಾಸಗಿ ಬಸ್ ಸಂಚಾರ ಇರುತ್ತೆ. ಈಗಾಗಲೇ ಫ್ರೀ ಸ್ಕೀಂ ನಿಂದ ಖಾಸಗಿ ಸಾರಿಗೆ ಬಸ್ ಉದ್ಯಮ ಬಹಳ ಸಂಕಷ್ಟದಲ್ಲಿದೆ. ಅಲ್ಲದೇ ಒಂದು ಬಸ್ ನಿಲ್ಲಿಸಿದರೆ ನಮ್ಮ ನೌಕರರ ಜೀವನಕ್ಕೆ ತೊಂದರೆ ಆಗುತ್ತದೆ ಎಂದರು.

ಇನ್ನು ನಾಡು ನುಡಿ ಜಲ ವಿಚಾರಕ್ಕೆ ನಾವು ಬದ್ದರಿದ್ದೇವೆ. ಸಂಘಟನೆಯ ಪ್ರಮುಖರು ಪ್ರತಿಭಟನೆಯಲ್ಲೂ ಭಾಗಿಯುತ್ತೇವೆ. ಆದರೆ ಬಸ್ ನಿಲ್ಲಿಸಿ ನೌಕರರಿಗೆ ತೊಂದರೆ ನೀಡಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago