ಮೈಸೂರು : ಪರಿಸರವು ಮಾನವರಿಗೆ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿ, ಸಸ್ಯ ಇತ್ಯಾದಿಗಳಿಗೆ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಪೊಲೀಸ್ ದಫೆದಾರ್ ಸುರೇಶ್ ಟಿ ಚಕ್ಕೋಡನಹಳ್ಳಿ ಹೇಳಿದರು.
ಎಚ್ ಡಿ ಕೋಟೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಪರಿಸರವನ್ನು ಉಳಿಸಿ ಬೆಳೆಸಿ ಎಂಬ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,
ಪರಿಸರದ ಮುಖ್ಯವಾದ ಅಂಶಗಳೆಂದರೆ ಗಾಳಿ, ನೀರು, ಮಣ್ಣು, ಅರಣ್ಯ , ಇತ್ಯಾದಿಗಳು ಯಾವುದೇ ಅಡೆತಡೆಯಿಲ್ಲದ ಉಳಿಯುವುದು ಬಹಳ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಿಸರದ ಸಂರಕ್ಷಣೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಹೆಚ್ಚುತ್ತಿರುವ ಮಾಲಿನ್ಯದ ಮಟ್ಟದಿಂದ ಪರಿಸರ ಪರಿಸ್ಥಿತಿಗಳು ಬಿಗಡಾಯಿಸುತ್ತಿದೆ. ಹಾಗಾಗಿ ರಕ್ಷಣೆ ಮತ್ತು ಸುಸ್ಥಿರ ಬಳಕೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಉತ್ತಮ ಪರಿಸರ ಉತ್ತಮ ಆರೋಗ್ಯಕ್ಕೆ ಕಾರಣವಾಗುತ್ತದೆ. ನಮ್ಮ ಸುತ್ತಲಿನ ಪರಿಸರ ಎಷ್ಟು ಚೆನ್ನಾಗಿರುತ್ತೆ ಅಷ್ಟು ನಾವು ಆರೋಗ್ಯವಾಗಿರುತ್ತೇವೆ. ಪರಿಸರ ಹಾಳಾದಷ್ಟು ನಮ್ಮ ಆರೋಗ್ಯ ಹಾಳಾಗುತ್ತದೆ. ಎಂದರು..
ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯ ಸುಹಾಸಿನಿ ದಿನೇಶ್, ಎಸ್. ಡಿ. ಎಂ. ಸಿ. ಅಧ್ಯಕ್ಷ ಸಿದ್ದರಾಜು , ಸರ್ಕಾರಿ ಮಹಿಳಾ ಪ್ರೌಢಶಾಲೆ ಉಪಪ್ರಾಂಶುಪಾಲ ವಿ.ಸಿ ಮಂಜುನಾಥ್ ಹಾಗೂ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…