ಮೈಸೂರು : ನಂಜನಗೂಡು ಮದುವೆ ಸಮಾರಂಭದಲ್ಲಿ ಮದುವೆ ಸಂಭ್ರಮದಲ್ಲಿರುವ ನವ ವಧು ವರ ಮತದಾನ ಜಾಗೃತಿ ಮೂಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿ ಹೆಬ್ಯಾ ಗ್ರಾಮದ ತುಳಸಿ ಹಾಗೂ ಸೋಮೇಶ್ವರಪುರ ಗ್ರಾಮ ಗಿರೀಶ್ , ಘೋಷವಾಕ್ಯ ಫಲಕ ಹಿಡಿದು ಮತದಾರರ ಫೋಟೋ ಫ್ರೇಮ್ನಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವ ಮೂಲಕ ‘ಏಪ್ರಿಲ್ 26 ರಂದು ಕಡ್ಡಾಯವಾಗಿ ಮತದಾನ ಮಾಡಿ ಎಂಬ ಸಂದೇಶ ಸಾರಿದರು.
ಈ ವಿಶೇಷ ಕ್ಷಣಕ್ಕೆ ವಿವಾಹ ವಧು-ವರರ ಸಂಬಂಧಿಕರು, ಸ್ನೇಹಿತರು ಸಾಕ್ಷಿಯಾದರು. ಸ್ವೀಪ್ ಸಮಿತಿಯ ವಿಭಿನ್ನ ಪ್ರಯತ್ನಕ್ಕೆ ನೆರೆದಿದ್ದವರಿಂದ ಪ್ರಶಂಸೆ ವ್ಯಕ್ತವಾಯಿತು.
ಈ ವೇಳೆ ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಕಾವ್ಯ, ಗುರುಸಿದ್ದಯ್ಯ, ನವೀನ್ ಹಾಜರಿದ್ದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…