Awareness on Dress Code at Chamundi Hill
ಮೈಸೂರು : ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿ ದರ್ಶನಕ್ಕಾಗಿ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ದೇವಸ್ಥಾನದ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ತುಂಡು ಬಟ್ಟೆ ತೊಟ್ಟು ಬರದಂತೆ ಚಾಮುಂಡೇಶ್ವರಿ ಭಕ್ತರು ಮನವಿ ಮಾಡಿದ್ದಾರೆ.
ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗ ಗುರುವಾರ ಭಿತ್ತಿಪತ್ರ ಹಿಡಿದು, ಸಾರ್ವಜನಿಕರಿಗೆ ಗುಲಾಬಿ ಹೂ ನೀಡುವ ಮೂಲಕ ಜಾಗೃತಿ ಮೂಡಿಸಿದ ಭಕ್ತ ವೃಂದದವರು, ಸರ್ಕಾರ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಸ ಸಂಹಿತೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.
ಈ ವೇಳೆ ಚಾಮುಂಡೇಶ್ವರಿ ಭಕ್ತ ವೃಂದದ ಸಂಚಾಲಕ ಆನಂದ್ ಮಾತನಾಡಿ, ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಸಾರ್ವಜನಿಕರು ಸರ್ಕಾರ ವಸ್ತ್ರ ಸಂಹಿತೆ ತರದಿದ್ದರೂ ಪರವಾಗಿಲ್ಲ ನಮ್ಮ ಸಂಸ್ಕೃತಿಯನ್ನು ಪಾಲಿಸಬೇಕು. ತಿರುಪತಿ, ಕೇರಳದ ಶಿವನ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾದರಿಯಲ್ಲಿ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಮನವಿ ಮಾಡಿದರು.
ಮಹೇಶ್, ಶ್ರುತಿ, ಶ್ವೇತಾ, ಕಿರಣ್, ಬಸವರಾಜು, ಮಣಿ, ಸೌಮ್ಯ, ಚಂದ್ರು, ಶೇಖರ್, ಕಲ್ಪನಾ, ತಾಯಮ್ಮ, ಸರೋಜ, ಜಲಜಾಕ್ಷಿ ಇನ್ನಿತರರು ಹಾಜರಿದ್ದರು.
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…