ಮೈಸೂರು: ಮಾದಕ ವಸ್ತುಗಳಿಂದ ಯುವಜನತೆ ದೂರವಿರಬೇಕು. ಅಭಿವೃದ್ಧಿಗೆ ಮಾರಕವಾದ ಇವುಗಳ ವಿರುದ್ಧ ಆಂದೋಲನ ಮಾಡಬೇಕು ಎಂದು ಅಂತರಸಂತೆ ಆರಕ್ಷಕ ಉಪನಿರೀಕ್ಷಕ ಚಂದ್ರಹಾಸನಾಯಕ ಹೇಳಿದರು.
ಪಟ್ಟಣದ ಸರಗೂರು ವೃತ್ತದ ಅಂತರಸಂತೆ ಉಪ ಪೊಲೀಸ್ ಠಾಣೆಯಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ವ್ಯಸನ ಮಾನಸಿಕ ಕಾಯಿಲೆಯಾಗಿದ್ದು, ಇದರ ವಿರುದ್ಧ ಎಚ್ಚರದಿಂದಿರುವಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ಮಾದಕ ವಸ್ತು ಸೇವನೆ, ಸಮಾಜದಲ್ಲಿ ಶಾಂತಿ ಕದಡಿ ಅಶಾಂತಿಗೆ ದಾರಿಮಾಡಿಕೊಡುತ್ತದೆ. ಹಾಗಾಗಿ ಯುವಜನತೆ ಇದರಿಂದ ದೂರವಿರಬೇಕು ಹಾಗೂ ಈ ಮಾದಕ ದುಶ್ಚಟಕ್ಕೆ ಬಲಿಯಾದವರನ್ನು ಸರಿದಾರಿಗೆ ತರುವ ಕೆಲಸದಲ್ಲಿ ತೊಡಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿದ್ಯಾರ್ಥಿಗಳು ಯಾವುದೇ ಸಮಸ್ಯೆಯಾಗಲಿ ತುರ್ತು ಸಂದರ್ಭದಲ್ಲಿ ನಮ್ಮ ಇಲಾಖೆಯ ೧೧೨ಗೆ ಕರೆ ಮಾಡಿ ಜೊತೆಗೆ ತಮ್ಮ ಸುತ್ತಮುತ್ತ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕಾನೂನು ಅರಿವು ಮತ್ತು ನೆರವು ಸಿಗುವ ಬಗ್ಗೆ ಮಾಹಿತಿಯನ್ನು ನೀಡಿ ಪೊಲೀಸ್ ಇಲಾಖೆಯ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಅಂತರಸಂತೆ ಪದಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೈನಾ, ಅಂತರಸಂತೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಂದರಮ್ಮ. ಶಿಕ್ಷಕರಾದ ನಾರಾಯಣಸ್ವಾಮಿ,ಹರ್ಷ, ಶರೀನ, ಲಲಿತ, ಕಾಳಿಂಗೇಗೌಡ, ಕೆಂಚನಹಳ್ಳಿಯ ಮುಖ್ಯ ಶಿಕ್ಷಕ ಸ್ವಾಮಿ, ಅಂತರ ಸಂತೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಾಣೆ ಬರಹಗಾರರ ಶ್ರೀಕಂಠ ಸ್ವಾಮಿ, ಗೋಪಾಲಕೃಷ್ಣ, ಚಂದ್ರು, ರಾಮಕೃಷ್ಣ, ಕೃಷ್ಣ ಸೇರಿದಂತೆ ಇತರರು ಹಾಜರಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…