ಮೈಸೂರು

ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಕಾನೂನು ಅರಿವು ಕಾರ್ಯಕ್ರಮ

ಮೈಸೂರು: ಮಾದಕ ವಸ್ತುಗಳಿಂದ ಯುವಜನತೆ ದೂರವಿರಬೇಕು. ಅಭಿವೃದ್ಧಿಗೆ ಮಾರಕವಾದ ಇವುಗಳ ವಿರುದ್ಧ ಆಂದೋಲನ ಮಾಡಬೇಕು ಎಂದು ಅಂತರಸಂತೆ ಆರಕ್ಷಕ ಉಪನಿರೀಕ್ಷಕ ಚಂದ್ರಹಾಸನಾಯಕ ಹೇಳಿದರು.

ಪಟ್ಟಣದ ಸರಗೂರು ವೃತ್ತದ ಅಂತರಸಂತೆ ಉಪ ಪೊಲೀಸ್ ಠಾಣೆಯಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ವ್ಯಸನ ಮಾನಸಿಕ ಕಾಯಿಲೆಯಾಗಿದ್ದು, ಇದರ ವಿರುದ್ಧ ಎಚ್ಚರದಿಂದಿರುವಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ಮಾದಕ ವಸ್ತು ಸೇವನೆ, ಸಮಾಜದಲ್ಲಿ ಶಾಂತಿ ಕದಡಿ ಅಶಾಂತಿಗೆ ದಾರಿಮಾಡಿಕೊಡುತ್ತದೆ. ಹಾಗಾಗಿ ಯುವಜನತೆ ಇದರಿಂದ ದೂರವಿರಬೇಕು ಹಾಗೂ ಈ ಮಾದಕ ದುಶ್ಚಟಕ್ಕೆ ಬಲಿಯಾದವರನ್ನು ಸರಿದಾರಿಗೆ ತರುವ ಕೆಲಸದಲ್ಲಿ ತೊಡಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳು ಯಾವುದೇ ಸಮಸ್ಯೆಯಾಗಲಿ ತುರ್ತು ಸಂದರ್ಭದಲ್ಲಿ ನಮ್ಮ ಇಲಾಖೆಯ ೧೧೨ಗೆ ಕರೆ ಮಾಡಿ ಜೊತೆಗೆ ತಮ್ಮ ಸುತ್ತಮುತ್ತ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕಾನೂನು ಅರಿವು ಮತ್ತು ನೆರವು ಸಿಗುವ ಬಗ್ಗೆ ಮಾಹಿತಿಯನ್ನು ನೀಡಿ ಪೊಲೀಸ್ ಇಲಾಖೆಯ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಂತರಸಂತೆ ಪದಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೈನಾ, ಅಂತರಸಂತೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಂದರಮ್ಮ. ಶಿಕ್ಷಕರಾದ ನಾರಾಯಣಸ್ವಾಮಿ,ಹರ್ಷ, ಶರೀನ, ಲಲಿತ, ಕಾಳಿಂಗೇಗೌಡ, ಕೆಂಚನಹಳ್ಳಿಯ ಮುಖ್ಯ ಶಿಕ್ಷಕ ಸ್ವಾಮಿ, ಅಂತರ ಸಂತೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಾಣೆ ಬರಹಗಾರರ ಶ್ರೀಕಂಠ ಸ್ವಾಮಿ, ಗೋಪಾಲಕೃಷ್ಣ, ಚಂದ್ರು, ರಾಮಕೃಷ್ಣ, ಕೃಷ್ಣ ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago