ಮೈಸೂರು: ಕೇಂದ್ರ ಸರ್ಕಾರದಿಂದ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗೆ 50 ರೂ ಗ್ಯಾಸ್ ಬೆಲೆ ಏರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಇಂದು(ಏಪ್ರಿಲ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಪಿಜಿ ಗ್ಯಾಸ್ ಸಿಲಿಂಡರ್ಗೆ 50 ರೂ. ಬೆಲೆ ಏರಿಕೆ ಕೇಂದ್ರ ಸರ್ಕಾರದಿಂದ ಪೆಟ್ರೋಲ್ ಮತ್ತು ಡಿಸೇಲ್ ಅಬಕಾರಿ ಸುಂಕವನ್ನು 2 ರೂ.ಹೆಚ್ಚಳ ಮಾಡಿದೆ. ಈ ವಿಚಾರಗಳ ಬಗ್ಗೆ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಂತಾರಾಷ್ಟ್ರೀಯ ಮಾರಕಟ್ಟೆಯಲ್ಲಿ ಕಚ್ಚಾ ತೈಲದಲ್ಲಿ ಬೆಲೆ ಹೆಚ್ಚಾಗಿದ್ದರಿಂದ ನಮ್ಮ ದೇಶದಲ್ಲೂ ಗ್ಯಾಸ್, ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಸಿದೆ. ಆದರೆ ಈ ಬೆಲೆಯಿಂದ ದೇಶದ ಜನತೆಗೆ ಹೊರೆಯಾಗಲ್ಲವೆಂದು ಕೇಂದ್ರ ಸರ್ಕಾರವವೇ ಸ್ಪಷ್ಟನೆ ನೀಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಈ ದೇಶದ ಕಡುಬಬಡವರು ಕೂಡ ಗ್ಯಾಸ್ ಬಳಸಬೇಕೆಂಬ ಹಿತದೃಷ್ಟಿಯಿಂದ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ವಲ ಯೋಜನೆಯನ್ನು ಅನುಷ್ಠಾನಗೊಳಿಸಿದರು. ಉಜ್ವಲ ಯೋಜನೆ ಗ್ಯಾಸ್ ಸಿಲಿಂಡರ್ 503 ಇದಿದ್ದು 553 ಆಗಿದೆ. ಇನ್ನೂ ಜನ ಸಾಮಾನ್ಯರು ಬಳಸುವಂತಹ ಸಿಲಿಂಡರ್ 803 ಇದ್ದದ್ದು 853 ರೂ. ಆಗಿದೆ. ನಾನು ರಾಜ್ಯದ ಜನತೆಗೆ ಗಮನಕ್ಕೆ ತರುವುದೇನೆಂದರೆ 2023ರ ಮಾರ್ಚ್ನಲ್ಲಿ ಒಂದು ಸಿಲಿಂಡರ್ನ ಬೆಲೆ 1,107 ರೂ. ಇತ್ತು. ಆದರೆ ಇಂದು ಬೆಲೆ ಏರಿಕೆಯಾಗಿದ್ದರೂ ಪ್ರತಿ ಸಿಲಿಂಡರ್ಗೆ 853 ರೂ. ಇದೆ.ಒಂದು ವೇಳೆ ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ಗ್ಯಾಸ್ ಬೆಲೆ 2500 ಇರುತ್ತಿತ್ತು. ಮೋದಿ ಇರುವ ಕಾರಣ 850 ರೂ ಇದೆ ಎಂದು ಹೇಳಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…