ಮೈಸೂರು

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ ಸಮರ್ಥಿಸಿಕೊಂಡ ಬಿ.ವೈ.ವಿಜಯೇಂದ್ರ

ಮೈಸೂರು: ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ ಗ್ಯಾಸ್ ಬೆಲೆ ಏರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ ಕೇಂದ್ರ ಸರ್ಕಾರದಿಂದ ಪೆಟ್ರೋಲ್‌ ಮತ್ತು ಡಿಸೇಲ್‌ ಅಬಕಾರಿ ಸುಂಕವನ್ನು 2 ರೂ.ಹೆಚ್ಚಳ ಮಾಡಿದೆ. ಈ ವಿಚಾರಗಳ ಬಗ್ಗೆ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಂತಾರಾಷ್ಟ್ರೀಯ ಮಾರಕಟ್ಟೆಯಲ್ಲಿ ಕಚ್ಚಾ ತೈಲದಲ್ಲಿ ಬೆಲೆ ಹೆಚ್ಚಾಗಿದ್ದರಿಂದ ನಮ್ಮ ದೇಶದಲ್ಲೂ ಗ್ಯಾಸ್‌, ಪೆಟ್ರೋಲ್‌ ಮತ್ತು ಡಿಸೇಲ್‌ ದರ ಏರಿಸಿದೆ. ಆದರೆ ಈ ಬೆಲೆಯಿಂದ ದೇಶದ ಜನತೆಗೆ ಹೊರೆಯಾಗಲ್ಲವೆಂದು ಕೇಂದ್ರ ಸರ್ಕಾರವವೇ ಸ್ಪಷ್ಟನೆ ನೀಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ದೇಶದ ಕಡುಬಬಡವರು ಕೂಡ ಗ್ಯಾಸ್‌ ಬಳಸಬೇಕೆಂಬ ಹಿತದೃಷ್ಟಿಯಿಂದ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ವಲ ಯೋಜನೆಯನ್ನು ಅನುಷ್ಠಾನಗೊಳಿಸಿದರು. ಉಜ್ವಲ ಯೋಜನೆ ಗ್ಯಾಸ್‌ ಸಿಲಿಂಡರ್‌ 503 ಇದಿದ್ದು 553 ಆಗಿದೆ. ಇನ್ನೂ ಜನ ಸಾಮಾನ್ಯರು ಬಳಸುವಂತಹ ಸಿಲಿಂಡರ್‌ 803 ಇದ್ದದ್ದು 853 ರೂ. ಆಗಿದೆ. ನಾನು ರಾಜ್ಯದ ಜನತೆಗೆ ಗಮನಕ್ಕೆ ತರುವುದೇನೆಂದರೆ 2023ರ ಮಾರ್ಚ್‌ನಲ್ಲಿ ಒಂದು ಸಿಲಿಂಡರ್‌ನ ಬೆಲೆ 1,107 ರೂ. ಇತ್ತು. ಆದರೆ ಇಂದು ಬೆಲೆ ಏರಿಕೆಯಾಗಿದ್ದರೂ ಪ್ರತಿ ಸಿಲಿಂಡರ್‌ಗೆ 853 ರೂ. ಇದೆ.ಒಂದು ವೇಳೆ ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ಗ್ಯಾಸ್ ಬೆಲೆ 2500 ಇರುತ್ತಿತ್ತು. ಮೋದಿ ಇರುವ ಕಾರಣ 850 ರೂ ಇದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

6 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

6 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

6 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

11 hours ago