ಮೈಸೂರು

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ ಸಮರ್ಥಿಸಿಕೊಂಡ ಬಿ.ವೈ.ವಿಜಯೇಂದ್ರ

ಮೈಸೂರು: ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ ಗ್ಯಾಸ್ ಬೆಲೆ ಏರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ ಕೇಂದ್ರ ಸರ್ಕಾರದಿಂದ ಪೆಟ್ರೋಲ್‌ ಮತ್ತು ಡಿಸೇಲ್‌ ಅಬಕಾರಿ ಸುಂಕವನ್ನು 2 ರೂ.ಹೆಚ್ಚಳ ಮಾಡಿದೆ. ಈ ವಿಚಾರಗಳ ಬಗ್ಗೆ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಂತಾರಾಷ್ಟ್ರೀಯ ಮಾರಕಟ್ಟೆಯಲ್ಲಿ ಕಚ್ಚಾ ತೈಲದಲ್ಲಿ ಬೆಲೆ ಹೆಚ್ಚಾಗಿದ್ದರಿಂದ ನಮ್ಮ ದೇಶದಲ್ಲೂ ಗ್ಯಾಸ್‌, ಪೆಟ್ರೋಲ್‌ ಮತ್ತು ಡಿಸೇಲ್‌ ದರ ಏರಿಸಿದೆ. ಆದರೆ ಈ ಬೆಲೆಯಿಂದ ದೇಶದ ಜನತೆಗೆ ಹೊರೆಯಾಗಲ್ಲವೆಂದು ಕೇಂದ್ರ ಸರ್ಕಾರವವೇ ಸ್ಪಷ್ಟನೆ ನೀಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ದೇಶದ ಕಡುಬಬಡವರು ಕೂಡ ಗ್ಯಾಸ್‌ ಬಳಸಬೇಕೆಂಬ ಹಿತದೃಷ್ಟಿಯಿಂದ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ವಲ ಯೋಜನೆಯನ್ನು ಅನುಷ್ಠಾನಗೊಳಿಸಿದರು. ಉಜ್ವಲ ಯೋಜನೆ ಗ್ಯಾಸ್‌ ಸಿಲಿಂಡರ್‌ 503 ಇದಿದ್ದು 553 ಆಗಿದೆ. ಇನ್ನೂ ಜನ ಸಾಮಾನ್ಯರು ಬಳಸುವಂತಹ ಸಿಲಿಂಡರ್‌ 803 ಇದ್ದದ್ದು 853 ರೂ. ಆಗಿದೆ. ನಾನು ರಾಜ್ಯದ ಜನತೆಗೆ ಗಮನಕ್ಕೆ ತರುವುದೇನೆಂದರೆ 2023ರ ಮಾರ್ಚ್‌ನಲ್ಲಿ ಒಂದು ಸಿಲಿಂಡರ್‌ನ ಬೆಲೆ 1,107 ರೂ. ಇತ್ತು. ಆದರೆ ಇಂದು ಬೆಲೆ ಏರಿಕೆಯಾಗಿದ್ದರೂ ಪ್ರತಿ ಸಿಲಿಂಡರ್‌ಗೆ 853 ರೂ. ಇದೆ.ಒಂದು ವೇಳೆ ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ಗ್ಯಾಸ್ ಬೆಲೆ 2500 ಇರುತ್ತಿತ್ತು. ಮೋದಿ ಇರುವ ಕಾರಣ 850 ರೂ ಇದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

4 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 hours ago