ಮೈಸೂರು

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ ಸಮರ್ಥಿಸಿಕೊಂಡ ಬಿ.ವೈ.ವಿಜಯೇಂದ್ರ

ಮೈಸೂರು: ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ ಗ್ಯಾಸ್ ಬೆಲೆ ಏರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ ಕೇಂದ್ರ ಸರ್ಕಾರದಿಂದ ಪೆಟ್ರೋಲ್‌ ಮತ್ತು ಡಿಸೇಲ್‌ ಅಬಕಾರಿ ಸುಂಕವನ್ನು 2 ರೂ.ಹೆಚ್ಚಳ ಮಾಡಿದೆ. ಈ ವಿಚಾರಗಳ ಬಗ್ಗೆ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಂತಾರಾಷ್ಟ್ರೀಯ ಮಾರಕಟ್ಟೆಯಲ್ಲಿ ಕಚ್ಚಾ ತೈಲದಲ್ಲಿ ಬೆಲೆ ಹೆಚ್ಚಾಗಿದ್ದರಿಂದ ನಮ್ಮ ದೇಶದಲ್ಲೂ ಗ್ಯಾಸ್‌, ಪೆಟ್ರೋಲ್‌ ಮತ್ತು ಡಿಸೇಲ್‌ ದರ ಏರಿಸಿದೆ. ಆದರೆ ಈ ಬೆಲೆಯಿಂದ ದೇಶದ ಜನತೆಗೆ ಹೊರೆಯಾಗಲ್ಲವೆಂದು ಕೇಂದ್ರ ಸರ್ಕಾರವವೇ ಸ್ಪಷ್ಟನೆ ನೀಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ದೇಶದ ಕಡುಬಬಡವರು ಕೂಡ ಗ್ಯಾಸ್‌ ಬಳಸಬೇಕೆಂಬ ಹಿತದೃಷ್ಟಿಯಿಂದ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ವಲ ಯೋಜನೆಯನ್ನು ಅನುಷ್ಠಾನಗೊಳಿಸಿದರು. ಉಜ್ವಲ ಯೋಜನೆ ಗ್ಯಾಸ್‌ ಸಿಲಿಂಡರ್‌ 503 ಇದಿದ್ದು 553 ಆಗಿದೆ. ಇನ್ನೂ ಜನ ಸಾಮಾನ್ಯರು ಬಳಸುವಂತಹ ಸಿಲಿಂಡರ್‌ 803 ಇದ್ದದ್ದು 853 ರೂ. ಆಗಿದೆ. ನಾನು ರಾಜ್ಯದ ಜನತೆಗೆ ಗಮನಕ್ಕೆ ತರುವುದೇನೆಂದರೆ 2023ರ ಮಾರ್ಚ್‌ನಲ್ಲಿ ಒಂದು ಸಿಲಿಂಡರ್‌ನ ಬೆಲೆ 1,107 ರೂ. ಇತ್ತು. ಆದರೆ ಇಂದು ಬೆಲೆ ಏರಿಕೆಯಾಗಿದ್ದರೂ ಪ್ರತಿ ಸಿಲಿಂಡರ್‌ಗೆ 853 ರೂ. ಇದೆ.ಒಂದು ವೇಳೆ ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ಗ್ಯಾಸ್ ಬೆಲೆ 2500 ಇರುತ್ತಿತ್ತು. ಮೋದಿ ಇರುವ ಕಾರಣ 850 ರೂ ಇದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

2 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

2 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

3 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

4 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

4 hours ago