ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ದರ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು.
ಮೈಸೂರಿನಲ್ಲಿ ಇಂದು(ಏಪ್ರಿಲ್.8) ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಅಗತ್ಯ ವಸ್ತುಗಳಾದ ಹಾಲು, ನೀರು, ಕಸ ಸೇರಿದಂತೆ 48 ಪದಾರ್ಥಗಳ ಮೇಲೆ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಎಸಿ ರೂಮ್ ಬಿಟ್ಟು ರಾಜ್ಯ ಪ್ರವಾಸ ಮಾಡಿ ಜನತೆಯ ಅಭಿಪ್ರಾಯಗಳನ್ನು ಪಡೆದರೆ ಉತ್ತಮ ತಿರುಗೇಟು ನೀಡಿದರು.
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಏರಿಕೆಯಾಗಿರುವುದಕ್ಕೆ. ಆದರೆ ನೀವು ಯಾಕೆ ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಹಾಲಿನ ಮೇಲೆ ದರ ಏರಿಕೆ ಮಾಡಿದ್ದೀರಿ? ಅಲ್ಲದೇ ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಅಗತ್ಯ ವಸ್ತುಗಳ ಮೇಲೆ ಯಾಕೆ ದರ ಏರಿಕೆ ಮಾಡಿದ್ದೀರಾ? ಅವುಗಳೇನೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಗುವಂತಹ ವಸ್ತುಗಳಾ? ನಿಜವಾಗಿಯೂ ಜನತೆಗೆ ಕಪಾಳ ಮೋಕ್ಷ ಮಾಡುತ್ತಿರುವುದು ನೀವೂ, ಕೇಂದ್ರ ಸರ್ಕಾರವಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರತಿ ತಿಂಗಳು 1 ತಾರೀಖಿನಂದು ಪೊಲೀಸ್ ಇಲಾಖೆ ವೇತನ ಆಗಬೇಕಿತ್ತು. ಆದರೆ ಇನ್ನೂ ರಾಜ್ಯ ಸರ್ಕಾರ ಸಂಬಳ ಹಾಕಿಲ್ಲ. ಅಲ್ಲದೇ ಅದೊಂದು ಇಲಾಖೆಯಲ್ಲಿ ಮಾತ್ರವಲ್ಲ, ಸರ್ಕಾರಿ ನೌಕರರಿಗೆ, ಶಿಕ್ಷಕರಿಗೆ ವೇತನ ನೀಡಿಲ್ಲ. ಹೀಗಾಗಿಯೇ ಪ್ರತಿನಿತ್ಯ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ಅದಕ್ಕೆ ದರ ಏರಿಕೆಯೇ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…