ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ದರ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು.
ಮೈಸೂರಿನಲ್ಲಿ ಇಂದು(ಏಪ್ರಿಲ್.8) ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಅಗತ್ಯ ವಸ್ತುಗಳಾದ ಹಾಲು, ನೀರು, ಕಸ ಸೇರಿದಂತೆ 48 ಪದಾರ್ಥಗಳ ಮೇಲೆ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಎಸಿ ರೂಮ್ ಬಿಟ್ಟು ರಾಜ್ಯ ಪ್ರವಾಸ ಮಾಡಿ ಜನತೆಯ ಅಭಿಪ್ರಾಯಗಳನ್ನು ಪಡೆದರೆ ಉತ್ತಮ ತಿರುಗೇಟು ನೀಡಿದರು.
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಏರಿಕೆಯಾಗಿರುವುದಕ್ಕೆ. ಆದರೆ ನೀವು ಯಾಕೆ ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಹಾಲಿನ ಮೇಲೆ ದರ ಏರಿಕೆ ಮಾಡಿದ್ದೀರಿ? ಅಲ್ಲದೇ ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಅಗತ್ಯ ವಸ್ತುಗಳ ಮೇಲೆ ಯಾಕೆ ದರ ಏರಿಕೆ ಮಾಡಿದ್ದೀರಾ? ಅವುಗಳೇನೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಗುವಂತಹ ವಸ್ತುಗಳಾ? ನಿಜವಾಗಿಯೂ ಜನತೆಗೆ ಕಪಾಳ ಮೋಕ್ಷ ಮಾಡುತ್ತಿರುವುದು ನೀವೂ, ಕೇಂದ್ರ ಸರ್ಕಾರವಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರತಿ ತಿಂಗಳು 1 ತಾರೀಖಿನಂದು ಪೊಲೀಸ್ ಇಲಾಖೆ ವೇತನ ಆಗಬೇಕಿತ್ತು. ಆದರೆ ಇನ್ನೂ ರಾಜ್ಯ ಸರ್ಕಾರ ಸಂಬಳ ಹಾಕಿಲ್ಲ. ಅಲ್ಲದೇ ಅದೊಂದು ಇಲಾಖೆಯಲ್ಲಿ ಮಾತ್ರವಲ್ಲ, ಸರ್ಕಾರಿ ನೌಕರರಿಗೆ, ಶಿಕ್ಷಕರಿಗೆ ವೇತನ ನೀಡಿಲ್ಲ. ಹೀಗಾಗಿಯೇ ಪ್ರತಿನಿತ್ಯ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ಅದಕ್ಕೆ ದರ ಏರಿಕೆಯೇ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದರು.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…