ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ದರ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು.
ಮೈಸೂರಿನಲ್ಲಿ ಇಂದು(ಏಪ್ರಿಲ್.8) ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಅಗತ್ಯ ವಸ್ತುಗಳಾದ ಹಾಲು, ನೀರು, ಕಸ ಸೇರಿದಂತೆ 48 ಪದಾರ್ಥಗಳ ಮೇಲೆ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಎಸಿ ರೂಮ್ ಬಿಟ್ಟು ರಾಜ್ಯ ಪ್ರವಾಸ ಮಾಡಿ ಜನತೆಯ ಅಭಿಪ್ರಾಯಗಳನ್ನು ಪಡೆದರೆ ಉತ್ತಮ ತಿರುಗೇಟು ನೀಡಿದರು.
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಏರಿಕೆಯಾಗಿರುವುದಕ್ಕೆ. ಆದರೆ ನೀವು ಯಾಕೆ ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಹಾಲಿನ ಮೇಲೆ ದರ ಏರಿಕೆ ಮಾಡಿದ್ದೀರಿ? ಅಲ್ಲದೇ ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಅಗತ್ಯ ವಸ್ತುಗಳ ಮೇಲೆ ಯಾಕೆ ದರ ಏರಿಕೆ ಮಾಡಿದ್ದೀರಾ? ಅವುಗಳೇನೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಗುವಂತಹ ವಸ್ತುಗಳಾ? ನಿಜವಾಗಿಯೂ ಜನತೆಗೆ ಕಪಾಳ ಮೋಕ್ಷ ಮಾಡುತ್ತಿರುವುದು ನೀವೂ, ಕೇಂದ್ರ ಸರ್ಕಾರವಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರತಿ ತಿಂಗಳು 1 ತಾರೀಖಿನಂದು ಪೊಲೀಸ್ ಇಲಾಖೆ ವೇತನ ಆಗಬೇಕಿತ್ತು. ಆದರೆ ಇನ್ನೂ ರಾಜ್ಯ ಸರ್ಕಾರ ಸಂಬಳ ಹಾಕಿಲ್ಲ. ಅಲ್ಲದೇ ಅದೊಂದು ಇಲಾಖೆಯಲ್ಲಿ ಮಾತ್ರವಲ್ಲ, ಸರ್ಕಾರಿ ನೌಕರರಿಗೆ, ಶಿಕ್ಷಕರಿಗೆ ವೇತನ ನೀಡಿಲ್ಲ. ಹೀಗಾಗಿಯೇ ಪ್ರತಿನಿತ್ಯ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ಅದಕ್ಕೆ ದರ ಏರಿಕೆಯೇ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದರು.
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಬೋಧಿಸಬೇಕೆಂದರೆ ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…