ಮೈಸೂರು: ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ವಿರುದ್ಧ ಹೇಳಿಕೆ ನೀಡುವವರು ಅಯೋಗ್ಯರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಗರದ ಟಿ.ಕೆ.ಲೇಔಟ್ ನಿವಾಸದಲ್ಲಿ ಇಂದು(ಜನವರಿ.31) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದ ಎಲ್ಲಾ ನಾಗರೀಕರಿಗೂ ಅವರವರ ನಂಬಿಕೆ ಪ್ರಕಾರ ಬದುಕುವ ಸ್ವಾತಂತ್ರ್ಯವಿದೆ. ಕುಂಭಮೇಳದ ವಿರುದ್ಧ ಹೇಳಿಕೆ ನೀಡುವವರೇ ಅಯೋಗ್ಯರೆಂದು ಹೇಳುವವರೇ ಅಯೋಗ್ಯರು ಎಂದು ವಾಗ್ದಾಳಿ ನಡೆಸಿದರು.
ಹಿಂದೂ ಧರ್ಮದಲ್ಲಿ ಒಂದೇ ರೀತಿಯ ನಂಬಿಕೆ ಇದೆಯಾ? ಹಿಂದೂ ಧರ್ಮದಲ್ಲಿ ಅನೇಕ ರೀತಿಯ ನಂಬಿಕೆ ಇದೆ. ನಾಸ್ತಿಕರೂ ಸಹ ಹಿಂದೂ ಧರ್ಮದಲ್ಲಿದ್ದಾರೆ. ಹಿಂದೂ ಧರ್ಮದ ಬಗ್ಗೆ ಟೀಕೆ ಮಾಡುತ್ತಾರೆ ಎಂದರು.
ಕುಂಭಮೇಳದಲ್ಲಿ ಸ್ನಾನದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಯಾರಿಗೆ ನಂಬಿಕೆ ಇರುತ್ತದೆ ಅವರು ಹೋಗಿ ಸ್ನಾನ ಮಾಡುತ್ತಾರೆ. ನಂಬಿಕೆ ಇಲ್ಲದವರು ಕುಂಭಮೇಳಕ್ಕೆ ಹೋಗಿ ಸ್ನಾನ ಮಾಡಲ್ಲ ಒಂದೇ ರೀತಿ ನಂಬಿಕೆ ಇರಬೇಕು ಎಂದು ಹೇಳಲು ಸಾಧ್ಯವಿಲ್ಲ. ನನಗೆ ದೇವರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…
ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್…