ಮೈಸೂರು

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅನುಯಾಯಿಗಳ ದೀಕ್ಷಾಭೂಮಿ ಯಾತ್ರೆಗೆ ಚಾಲನೆ

ಮೈಸೂರು: ಭಾರತ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ ಡಾ.ಬಿ. ಆರ್‌ ಅಂಬೇಡ್ಕರ್‌ ಅವರು ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಸ್ಥಳಾವಾದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಜಿಲ್ಲೆಯಿಂದ ಈ ಬಾರಿ 325 ಅನುಯಾಯಿಗಳನ್ನು ಏಳು ವೋಲ್ಲೊ ಬಸ್ಸುಗಳಲ್ಲಿ ಕಳುಹಿಸಲಾಯಿತು.

ಗುರುವಾರ ಕಾಡ ಕಚೇರಿ ಬಳಿ ಬೆಳಗ್ಗೆ 10.30 ಕ್ಕೆ ಯಾತ್ರಾರ್ತಿಗಳು ಬಸ್‌ಗಳಿಗೆ ನೀಲಿ ನಿಶಾನೆ ತೋರುವುದರ ಮೂಲಕ ಶಾಸಕ ದರ್ಶನ್‌ ಧ್ರುವನಾರಾಯಣಾ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರವರ್ತನ ದಿನ ಅತ್ಯಂತ ಪವಿತ್ರವಾಗಿದ್ದು ಕರ್ನಾಟಕ ಸರ್ಕಾರವು ಅಂಬೇಡ್ಕರ್ ಅನುಯಾಯಿಗಳನ್ನು ನಾಗಪುರಕ್ಕೆ ಕಳಿಸುವ ದೃಷ್ಟಿಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ. ಕರ್ನಾಟಕದ ಪ್ರತಿಷ್ಠಿತ ಕಾರ್ಯಕ್ರಮವಾದ ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚೆಚ್ಚು ಅನುಯಾಯಿಗಳನ್ನು ಕಳಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಪ್ರತಿವರ್ಷ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿಗೆ ಯಾತ್ರಾರ್ತಿ ಗಳನ್ನು ಕಳಿಸಲಾಗುತ್ತಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವಿಜಯ ದಶಮಿ ದಿನದಂದು ಬೌದ್ಧ ಧರ್ಮಕ್ಕೆ ಪರಿವರ್ತನೆಗೊಂಡ ದಿನವನ್ನು ನಾಗಪುರದಲ್ಲಿ ಬಹಳ ಅರ್ಥಪೂರ್ಣವಾಗಿ “ಪ್ರವರ್ತನ ದಿನ”ವೆಂದು ಆಚರಿಸಲಾಗುತ್ತದೆ. ಆ ದಿನದಂದು ಭಾರತದ ನಾನಾ ಭಾಗಗಳಿಂದ ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರಕ್ಕೆ ಆಗಮಿಸುತ್ತಾರೆ. ಸಮಾಜ ಕಲ್ಯಾಣ ಇಲಾಖೆಯು ಪ್ರತಿ ವರ್ಷ ಕರ್ನಾಟಕದಲ್ಲಿನ ಅಂಬೇಡ್ಕರ್ ಅನುಯಾಯಿಗಳನ್ನು ಪ್ರತಿ ವರ್ಷ ವಿಜಯದಶಮಿ ಹಿಂದಿನ ಎರಡು ದಿನ ಮೊದಲು ವಿವಿಧ ಜಿಲ್ಲೆಗಳಿಂದ ಕಳಿಸಲಾಗುತ್ತದೆ. ಯಾತ್ರಾರ್ತಿಗಳು ವಿಜಯದಶಮಿ ದಿನದಂದು ಅಲ್ಲಿಗೆ ತಲುಪುತ್ತಾರೆ.. ಈ ಬಾರಿ 2024- 25ನೇ ಸಾಲಿಗೆ ಕರ್ನಾಟಕದಿಂದ ಒಟ್ಟು 7700 ಜನ ಯತ್ರಾರ್ತಿಗಳನ್ನು ಕಳಿಸಲಾಗುತ್ತಿದೆ.. ಅದರಲ್ಲಿ ಮೈಸೂರು ಜಿಲ್ಲೆಗೆ 325 ಗುರಿಯನ್ನು ನಿಗದಿಪಡಿಸಲಾಗಿದ್ದು 450 ಅರ್ಜಿಗಳು ಆನ್ಲೈನ್ ಮೂಲಕ ಸಲ್ಲಿಕೆಯಾಗಿದ್ದವು. ಅದರ ಪೈಕಿ ಅಂತಿಮವಾಗಿ 325 ಮಂದಿಯನ್ನು ಕಳುಹಿಸಿಕೊಡಲಾಗುತ್ತಿದೆ.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ. ಬಿ ಹಾಗೂ AVSS ಸಹಕಾರ ಸಂಘದ ಮುಖಂಡರಾದ ತುಂಬಲ ರಾಮಣ್ಣನವರು ಡಿಎಸ್ಎಸ್ ಮುಖಂಡರಾದ ಮಲಿಯೂರು ಸೋಮಣ್ಣನವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು, ವಾರ್ಡನ್ ಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

29 mins ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

10 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

13 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

14 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

14 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

14 hours ago