ಮೈಸೂರು

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅನುಯಾಯಿಗಳ ದೀಕ್ಷಾಭೂಮಿ ಯಾತ್ರೆಗೆ ಚಾಲನೆ

ಮೈಸೂರು: ಭಾರತ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ ಡಾ.ಬಿ. ಆರ್‌ ಅಂಬೇಡ್ಕರ್‌ ಅವರು ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಸ್ಥಳಾವಾದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಜಿಲ್ಲೆಯಿಂದ ಈ ಬಾರಿ 325 ಅನುಯಾಯಿಗಳನ್ನು ಏಳು ವೋಲ್ಲೊ ಬಸ್ಸುಗಳಲ್ಲಿ ಕಳುಹಿಸಲಾಯಿತು.

ಗುರುವಾರ ಕಾಡ ಕಚೇರಿ ಬಳಿ ಬೆಳಗ್ಗೆ 10.30 ಕ್ಕೆ ಯಾತ್ರಾರ್ತಿಗಳು ಬಸ್‌ಗಳಿಗೆ ನೀಲಿ ನಿಶಾನೆ ತೋರುವುದರ ಮೂಲಕ ಶಾಸಕ ದರ್ಶನ್‌ ಧ್ರುವನಾರಾಯಣಾ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರವರ್ತನ ದಿನ ಅತ್ಯಂತ ಪವಿತ್ರವಾಗಿದ್ದು ಕರ್ನಾಟಕ ಸರ್ಕಾರವು ಅಂಬೇಡ್ಕರ್ ಅನುಯಾಯಿಗಳನ್ನು ನಾಗಪುರಕ್ಕೆ ಕಳಿಸುವ ದೃಷ್ಟಿಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ. ಕರ್ನಾಟಕದ ಪ್ರತಿಷ್ಠಿತ ಕಾರ್ಯಕ್ರಮವಾದ ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚೆಚ್ಚು ಅನುಯಾಯಿಗಳನ್ನು ಕಳಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಪ್ರತಿವರ್ಷ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿಗೆ ಯಾತ್ರಾರ್ತಿ ಗಳನ್ನು ಕಳಿಸಲಾಗುತ್ತಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವಿಜಯ ದಶಮಿ ದಿನದಂದು ಬೌದ್ಧ ಧರ್ಮಕ್ಕೆ ಪರಿವರ್ತನೆಗೊಂಡ ದಿನವನ್ನು ನಾಗಪುರದಲ್ಲಿ ಬಹಳ ಅರ್ಥಪೂರ್ಣವಾಗಿ “ಪ್ರವರ್ತನ ದಿನ”ವೆಂದು ಆಚರಿಸಲಾಗುತ್ತದೆ. ಆ ದಿನದಂದು ಭಾರತದ ನಾನಾ ಭಾಗಗಳಿಂದ ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರಕ್ಕೆ ಆಗಮಿಸುತ್ತಾರೆ. ಸಮಾಜ ಕಲ್ಯಾಣ ಇಲಾಖೆಯು ಪ್ರತಿ ವರ್ಷ ಕರ್ನಾಟಕದಲ್ಲಿನ ಅಂಬೇಡ್ಕರ್ ಅನುಯಾಯಿಗಳನ್ನು ಪ್ರತಿ ವರ್ಷ ವಿಜಯದಶಮಿ ಹಿಂದಿನ ಎರಡು ದಿನ ಮೊದಲು ವಿವಿಧ ಜಿಲ್ಲೆಗಳಿಂದ ಕಳಿಸಲಾಗುತ್ತದೆ. ಯಾತ್ರಾರ್ತಿಗಳು ವಿಜಯದಶಮಿ ದಿನದಂದು ಅಲ್ಲಿಗೆ ತಲುಪುತ್ತಾರೆ.. ಈ ಬಾರಿ 2024- 25ನೇ ಸಾಲಿಗೆ ಕರ್ನಾಟಕದಿಂದ ಒಟ್ಟು 7700 ಜನ ಯತ್ರಾರ್ತಿಗಳನ್ನು ಕಳಿಸಲಾಗುತ್ತಿದೆ.. ಅದರಲ್ಲಿ ಮೈಸೂರು ಜಿಲ್ಲೆಗೆ 325 ಗುರಿಯನ್ನು ನಿಗದಿಪಡಿಸಲಾಗಿದ್ದು 450 ಅರ್ಜಿಗಳು ಆನ್ಲೈನ್ ಮೂಲಕ ಸಲ್ಲಿಕೆಯಾಗಿದ್ದವು. ಅದರ ಪೈಕಿ ಅಂತಿಮವಾಗಿ 325 ಮಂದಿಯನ್ನು ಕಳುಹಿಸಿಕೊಡಲಾಗುತ್ತಿದೆ.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ. ಬಿ ಹಾಗೂ AVSS ಸಹಕಾರ ಸಂಘದ ಮುಖಂಡರಾದ ತುಂಬಲ ರಾಮಣ್ಣನವರು ಡಿಎಸ್ಎಸ್ ಮುಖಂಡರಾದ ಮಲಿಯೂರು ಸೋಮಣ್ಣನವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು, ವಾರ್ಡನ್ ಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago