ಮೈಸೂರು

ಬಾಬು ಜಗಜೀವನ್‌ರಾಮ್‌ ಧೀಮಂತ ಸ್ವಾತಂತ್ರ್ಯ ಹೋರಾಟಗಾರ : ಸಚಿವ ಮಹದೇವಪ್ಪ

ಮೈಸೂರು : ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ, ಆಡಳಿತ ಚರ್ಚೆಯ ವಿಷಯಗಳಾಗಿವೆ. ಅವೆಲ್ಲವನ್ನು ಸಾಮಾನ್ಯ ಜನರಿಗೆ ತಲುಪಿಸಲು ಹೆಣಗಾಡುವ ಪರಿಸ್ಥಿತಿ ಎದುರಾಗಿದೆ. ನೈತಿಕತೆ ಕಳೆದು ಹೋಗಿ, ಸಾಂಸ್ಕೃತಿಕ ನಾಯಕತ್ವ ಕುಸಿಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಬೇಸರ ಹೊರಹಾಕಿದರು.

ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂದ ಘಟಿಕೋತ್ಸವ ಭವನದಲ್ಲಿ ಡಾ.ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಭಾರತದ ಸಾವಾಜಿಕ, ಆರ್ಥಿಕ ಮತ್ತು ರಾಜಕೀಯ ಪ್ರಗತಿಗೆ ಡಾ.ಬಾಬು ಜಗಜೀವನರಾಮ್ ಅವರ ಕೊಡುಗೆಗಳು ಎಂಬ ವಿಷಯ ಕುರಿತು ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಬಾಬು ಜಗಜೀವನ್ ಅವರು ಒಬ್ಬ ಧೀಮಂತ ಸ್ವಾತಂತ್ರ್ಯ ಹೋರಾಟಗಾರರು. ಗಾಂಧೀಜಿ ನೇತೃತ್ವದಲ್ಲಿ ರಾಷ್ಟ್ರೀಯ ಹೋರಾಟದ ಪ್ರಮುಖರಾದ ಪಂಡಿತ್ ಮದನ್‌ಮೋಹನ್ ಮಾಳವಿಯ ಅವರ ಭಾಂದವ್ಯದಿಂದ ಗಾಂಧೀಜಿ ಅವರನ್ನು ಭೇಟಿಯಾಗಿ ನಂತರ ಸ್ವಾತಂತ್ರ್ಯದ ಹೋರಾಟದಲ್ಲಿ ಎರಡು ಭಾರಿ ಸೆರೆವಾಸ ಅನುಭವಿಸಿದರು. ಜಗಜೀವನ್ ರಾಮ್ ಅವರು ಹೋರಾಟಗಾರರಂತೆಯೇ ರಾಷ್ಟ್ರ ಪ್ರೇಮಿ, ರಾಷ್ಟ್ರೀಯವಾದಿಯೂ ಹೌದು ಎಂದರು.

ಅಂದಿನ ದಿನಗಳಲ್ಲಿ ಜಾತಿ ತಾರತಮ್ಯ ,ಅಸ್ಪಶ್ಯತೆಯಲ್ಲಿ ನೊಂದು, ಸಾಮಾಜಿಕ ಅವ್ಯವಸ್ಥೆಯ ವಿರುದ್ಧವಾಗಿ ಹೋರಾಡಿದರು. ಅಸ್ಪಶ್ಯರು ಶಿಕ್ಷಣದಿಂದ ವಂಚಿತರಾದ ಕಾಲಗಟ್ಟದಲ್ಲೇ ೧೦ನೇ ತರಗತಿಯ ಗಣಿತದಲ್ಲಿ ೧೦೦ಕ್ಕೆ ೧೦೦ ಅಂಕಗಳಿಸಿ, ಇವತ್ತಿನ ಯುವಕರಿಗೆ ಆದರ್ಶವಾಗಿದ್ದಾರೆ. ಭಾರತದ ಸಾವಾಜಿಕ ವ್ಯವಸ್ಥೆ, ಜಾತಿ ವಿನಾಶಕ್ಕೆ ಒತ್ತು ಕೊಟ್ಟು, ಅದರ ಆಳವಾದ ಅಧ್ಯಯನದ ಜತೆಗೆ ಅನುಭವವನ್ನು ಹೊಂದಿದ್ದರು ಎಂದು ಹೇಳಿದರು.

ಭಾರತ ಜಾತಿ ವ್ಯವಸ್ಥೆ, ಅವರಿಗೆ ಪ್ರಧಾನಿ ಹುದ್ದೆಯ ಅವಕಾಶ ಕಸಿದುಕೊಂಡಿತು. ರಾಜಕಾರಣಿಯಾದ ಸಮಯದಲ್ಲೂ ಅಸ್ಪಸ್ಯತೆಗೆ ಒಳಗಾಗಿ ನೊಂದ ಅವರು, ನಾನು ಬ್ರಾಹ್ಮಣರನ್ನು ಇಷ್ಟ ಪಡುತ್ತೇನೆ, ಆದರೆ ಬ್ರಾಹ್ಮಣಶಾಹಿತ್ವ ವಿರೋಧಿಸುತ್ತೇನೆ ಎಂದಿದ್ದರು. ಮತೀಯವಾದ, ಜಾತಿವಾದದಿಂದ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ಅವರು ಶೂದ್ರರ ಪ್ರತ್ಯೇಕತೆಯ ವಿಚಾರಕ್ಕೆ ಆಸ್ಪದ ನೀಡಲಿಲ್ಲ ಎಂದು ಅಭಿಪ್ರಾಯಿಸಿದರು.

ಸರಳ, ಸಜ್ಜನಿಕೆಯ, ಸಂಸ್ಕೃತಿಯುತ ನಾಯಕ. ಅವರ ಆಡಳಿತ ಕೌಶಲ್ಯ, ದೃಷ್ಟಿಕೋನ, ಮುಂದಾಲೋಚನೆ ಭಾರತದ ಭವಿಷ್ಯದ ಕಡೆ ಇತ್ತು. ಕಾರ್ಮಿಕ ಸಚಿವರಾಗಿ ಅನೇಕ ಸೌಲಭ್ಯ, ರೈಲ್ವೆ ಮಂತ್ರಿಯಾಗಿ ಎಲ್ಲರನ್ನು ಸಮಾನರನ್ನಾಗಿಸಲು ಮೀಸಲಾತಿ ಜಾರಿಗೊಳಿಸಿದರು. ರಕ್ಷಣಾ ಸಚಿವರಾದಾಗ ೧೯೭೧. ಪಾಕಿಸ್ತಾನದ ಯುದ್ಧ ಗೆದ್ದು ಪತಾಕೆ ಹಾಕಿಸಿದರು. ಅವರು ಕೃಷಿ ಮಂತ್ರಿಯಾದ ಸಮಯದಲ್ಲಿ ಬಡತನ, ಕ್ಷಾಮ ಒದಗಿತ್ತು ಅಂತಹ ಸಂದರ್ಭದಲ್ಲೂ, ಆಹಾರ ಉತ್ಪಾದನೆಗೆ ಹಸಿರು ಕ್ರಾಂತಿ ಬೆಂಬಲಿಸಿ ಆಹಾರ ಸ್ವಾವಲಂಬನೆಗೆ ಕಾರಣರಾದರು. ಸಾವಾಜಿಕ ನ್ಯಾಯ ಆರ್ಥಿಕ ಸ್ವಾವಲಂಬನೆ ಕೆಲಸ ಮಾಡಿದರು ಎಂದು ಆಶಯ ವ್ಯಕ್ತಪಡಿಸಿದರು.

ಇಂದು ಸಾಂಸ್ಕೃತಿಕ ನಾಯಕತ್ವ ಕುಸಿದು, ಧಾರ್ಮಿಕ ವ್ಯವಸ್ಥೆ ಮೇಲೆಳುತ್ತಿದೆ. ಇದೆಲ್ಲರ ವಿರುದ್ದ, ಧ್ವನಿ ಎತ್ತಬೇಕಿದೆ. ಸಮ ಸಮಾಜದ ರಾಷ್ಟ್ರ ಕಟ್ಟಲು ಮುಂದಿನ ಪೀಳಿಗೆಗೆ, ಯುವಕರಿಗೆ, ಜನಸಾಮಾನ್ಯರಿಗೆ ಪ್ರರೇಪಿಸಬೇಕಿದೆ ಎಂದು ಹೇಳಿದರು.

ಬಳಿಕ ಡಾ.ಬಾಬು ಜಗಜೀವನರಾಮ್ ಅವರ ಜೀವನ ಸಾಧನೆ ಕುರಿತಾದ ಗ್ರಂಥ ಬಿಡುಗಡೆಗೊಳಿಸಲಾಯಿತು. ಹಾಗೂ ೨೦೨೪-೨೫ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಶೇ.೯೫ಕ್ಕಿಂತ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಕರಾಮುವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಕುಲಸಚಿವರು ಪ್ರೊ.ಎಸ್. ನವೀನ್ ಕುವಾರ್, ಮೈಸೂರು ವಿವಿ ಮಹಾರಾಜ ಕಾಲೇಜು ಪ್ರೊ.ಆರ್ ತಿಮ್ಮರಾಮಪ್ಪ, ಡಾ.ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ನಿರ್ದೇಶಕಿ ಡಾ.ಆರ್ ಶರಣಮ್ಮ, ಡಾ.ಸಿ.ಎಸ್ ಆನಂದ ಕುಮಾರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

3 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

6 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

6 hours ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

7 hours ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

7 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

7 hours ago