ಮೈಸೂರು: ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ನಾಳೆ ಚಾಮುಂಡಿಬೆಟ್ಟದಲ್ಲಿ ಸಾರ್ವಜನಿಕರಿಗೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಡಾ. ರಮೇಶ್ ಬಾನೋತ್ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂದು (ಫೆ.10) ರಾತ್ರಿ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡ ದೇವತೆ ಚಾಮುಂಡಿ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮದ ಅಂಗವಾಗಿ ವಿಐಪಿ ಮೂಮೆಂಟ್ಸ್ ಇರುವ ಕಾರಣ ಸೆಕ್ಯೂರಿಟಿ ಹಿನ್ನೆಲೆಯಲ್ಲಿ ಕೆಲ ಸಮಯ ಅಲ್ಪಮಟ್ಟಿನ ನಿರ್ಬಂಧ ವಿಧಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ರಮೇಶ್ ಬಾನೋತ್ ತಿಳಿಸಿದ್ದಾರೆ.
ನಾಳೆ ಬೆಳಗ್ಗೆ ೧೦ ರಿಂದ ೧೧. ೩೦ ರ ತನಕ ಸಾರ್ವಜನಿಕರಿಗೆ ಬೆಟ್ಟಕ್ಕೆ ತೆರಳಲು ನಿರ್ಬಂಧವಿರುತ್ತದೆ. ಈ ಸಮಯ ಹೊರತು ಪಡಿಸಿದ ಬಳಿಕ ಎಂದಿನಂತೆ ಭಕ್ತರು ಬೆಟ್ಟಕ್ಕೆ ತೆರಳಬಹುದಾಗಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…