ಮೈಸೂರು

ಬಹೂರೂಪಿ | ಜಾನಪದ ಉತ್ಸವಕ್ಕೆ ಚಾಲನೆ

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ ನಡೆಯುತ್ತಿರುವ 25 ನೇ ವರ್ಷದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಮೆರುಗೊಳಿಸಿತು.

ನಗರದ ಕಲಾಮಂದಿರ ಕಿಂದರಿಜೋಗಿ ವೇದಿಕೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೌದ್ಧ ಬಿಕ್ಕುಗಳ ವೇಷಧಾರಿಗಳು ದೀಪ ಹಿಡಿದು ವೇದಿಕೆ ಮೇಲೆ ಆಗಮಿಸಿದರು. ಮಣಿಪುರಿ ಸಂಗೀತ ವಾದ್ಯಾವಾದ ಶಯಾಶ್ ನುಡಿಸುವ ಮೂಲಕ ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ.ದುರ್ಗಾದಾಸ್ ಜಾನಪದ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಬಹುರೂಪಿಗೆ ಅಟಿಗಲ್ಲು ಹಾಕಲಾಯಿತು. ಉದ್ಘಾಟನಾ ಉದ್ಘಾಟನ ನುಡಿಗಳನ್ನಾಡಿದ ಅವರು, ಸಮಾಜದಲ್ಲಿ ನೆಮ್ಮದಿ, ಸಮಾನತೆ ಬದುಕು ನಡೆಸಲು ರಂಗಚಟುವಟಿಕೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಲ್ಲಿ ಈ ಬಾರಿಯ ಬಹುರೂಪಿ ನಡೆಯುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಸ್ವಾತಂತ್ರ್ಯದ ಪೂರ್ವದಲ್ಲಿ ಸಮಾಜದಲ್ಲಿ ಸಮಾನತೆ ಇರಲಿಲ್ಲ. ಜಾತಿ, ವರ್ಣದ ಹೆಸರಿನಲ್ಲಿ ತಾರತಮ್ಯ ನಡೆಸಲಾಗುತ್ತಿತ್ತು. ದಿನಕೂಲಿಗಳು, ಕೆಳವರ್ಗದವರು, ಕರಕುಶಲಕರ್ಮಿಗಳ ಬದುಕು ಶೋಚನೀಯವಾಗಿತ್ತು. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ರಚನೆ ಮಾಡಿದಾಗ ಸರ್ವರಿಗೂ ಸಮಾನತೆ ಬದುಕು ದೊರೆಯಿತು. ಸೌದಾರ್ಹತೆಯಿಂದ ಬೆರೆತು ಹಕ್ಕುಗಳನ್ನು ಪ್ರತಿಯೊಬ್ಬರು ಪಡೆಯುವಂತಾಯಿತು. ಭಾರತದ ಸಂವಿಧಾನ ಕಾನೂನು ಗ್ರಂಥವಾಗಿ ಜಗತ್ತಿನಲ್ಲೇ ಹೆಸರುವಾಸಿಯಾಗಿದೆ ಎಂದು ಹೇಳಿದರು.

ಸಿನಿಮಾದಲ್ಲಿ ಶೇ.70ರಷ್ಟು ಕಮರ್ಶಿಯಲ್ ಅಂಶ ಇರುತ್ತದೆ. ಆದರೆ, ರಂಗಭೂಮಿ ಕೇವಲ ಮನರಂಜನೆಯ ಭಾಗವಲ್ಲ. ಅದರಲ್ಲಿ ಸಾಮಾಜಿಕ ಬದ್ಧತೆ ಅಡಗಿದೆ. ಜಾನಪದ ತಾಯಿ ಬೇರು. ಈ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರಿಗೆ ಅವಕಾಶ ನೀಡಿರುವುದು ಖುಷಿಯ ವಿಚಾರ ಎಂದು ಸಂತಸ ವ್ಯಕ್ತಪಡಿಸಿದರು.

ಅಪರ ಜಿಲ್ಲಾಕಾರಿ ಡಾ. ಪಿ. ಶಿವರಾಜ್ ಮಾತನಾಡಿ, ಪ್ರತಿವರ್ಷ ವಿನೂತನ ಆಶಯದಲ್ಲಿ ಬಹುರೂಪಿ ನಡೆಯುತ್ತಿದೆ. ಈ ಬಾರಿ ಅಂಬೇಡ್ಕರ್ ಆಶಯದಲ್ಲಿ ನಡೆಯುತ್ತಿರುವುದು ಅರ್ಥಪೂರ್ಣವಾಗಿದೆ. ಜಗತ್ತು ಅಂಬೇಡ್ಕರ್ ಅವರ ಹೆಸರನ್ನು ಎಂದೂ ಮರೆಯುವುದಿಲ್ಲ ಎಂದರು.

ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಅಧ್ಯಕ್ಷತೆ ವಹಿಸಿದ್ದರು. ರಂಗಭೂಮಿ ಕಲಾವಿದೆ ಡಾ.ಗೀತಾ ಸಿದ್ಧಿ, ರಂಗಸಮಾಜದ ಸದಸ್ಯ ಶಶಿಧರ್ ಭಾರಿಘಾಟ್, ಕನ್ನಡ ಮತ್ತು ಸಂಸ್ಕ ತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್, ಸಂಚಾಲಕಿ ಗೀತಾ ಮೋಂಟಡ್ಕ ಸೇರಿದಂತೆ ಇತರರು ಹಾಜರಿದ್ದರು.

ಜನಪದ ಉತ್ಸವದ ಸಂಭ್ರಮ

ಜನಪದ ಉತ್ಸವದಲ್ಲಿ ರಂಗಾಸಕ್ತರ ಸಂಭ್ರಮದೊಂದಿಗೆ ಜನಪದ ಕಲೆಯೂ ಮೇಳೈಸಿತು. ಇದೇ ವೇಳೆ ಮೈಸೂರಿನ ಅರುಣೋಧಯ ತಂಡದ ವಿಶೇಷಚೇತನ ಮಕ್ಕಳ ಕಂಸಾಳೆ ಪ್ರದರ್ಶನ ಗಮನ ಸೆಳೆಯಿತು. ಬಾಗಲಕೋಟೆಯ ಬಯಲಾಟ ‘ಕೃಷ್ಣಾರ್ಜುನ ಕಾಳಗ’ ಜನಮನಸೂರೆಗೊಳಿಸಿತು. ಪಿರಿಯಾಪಟ್ಟಣದ ಅರೇಹಳ್ಳಿ ಗ್ರಾಮದ ತಂಡದವರು ನಡೆಸಿಕೊಟ್ಟ ವಾದ್ಯಸಂಗೀತ ವಿಶೇಷವಾಗಿತ್ತು. ಜಾನಪದ ಕಲಾ ತಂಡಗಳು, ವೇಶಧಾರಿಗಳಾಗಿ, ಕಂಸಾಳೆ ಹಿಡಿದು ಮಾದಪ್ಪನ ಹಾಡಿಗೆ ಹೆಚ್ಚಿ ಹಾಕಿದರು. ವಾರಾಂತ್ಯವಾದ ಭಾನುವಾರ ಸಾಕಷ್ಟು ರಂಗಾಸಕ್ತರು, ಹಿರಿಯರು, ಯುವಮನಸ್ಸುಗಳು ತಮ್ಮ ಸ್ನೇಹಿತರು ಮತ್ತು ಹಿತೈಷಿಗಳ ಜತೆಗೂಡಿ ರಂಗಾಯಣ ಅಂಗಳದಲ್ಲಿ ಜಮಾಯಿಸಿ ಜನಪದ ‘ರಸ’ ಸವಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

4 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

4 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

4 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

5 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

5 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

5 hours ago