ಮೈಸೂರು

ಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಬಳಕೆಗೆ ನಿರ್ಬಂಧ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧವಾಗುತ್ತಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆಯನ್ನೂ ಕೂಡ ನಡೆಸಿದ್ದಾರೆ. ಸದ್ಯ ಇದರೆ ಮಧ್ಯೆ ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಈ ಬಗ್ಗೆ‌ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ಹಳದಿ ವಲಯ ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ.

ಒಂದು ವೇಳೆ ಈ ಪ್ರದೇಶದಲ್ಲಿ ಡ್ರೋನ್​ ಕ್ಯಾಮೆರಾವನ್ನು ಬಳಸುವುದಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಅನಧಿಕೃತವಾಗಿ ಡ್ರೋನ್​ ಹಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನುನೂ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ.

ಅಕ್ಟೋಬರ್ 15 ರಂದು ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನ ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

lokesh

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

1 hour ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

1 hour ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

1 hour ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

1 hour ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

1 hour ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

1 hour ago