ಮೈಸೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧವಾಗುತ್ತಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆಯನ್ನೂ ಕೂಡ ನಡೆಸಿದ್ದಾರೆ. ಸದ್ಯ ಇದರೆ ಮಧ್ಯೆ ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಈ ಬಗ್ಗೆ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ಹಳದಿ ವಲಯ ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ.
ಒಂದು ವೇಳೆ ಈ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾವನ್ನು ಬಳಸುವುದಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಅನಧಿಕೃತವಾಗಿ ಡ್ರೋನ್ ಹಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನುನೂ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ.
ಅಕ್ಟೋಬರ್ 15 ರಂದು ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನ ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…