ಮೈಸೂರು

ಬೆಂಗಳೂರು-ಮೈಸೂರು ನಾನ್‌ ಸ್ಟಾಪ್ ಬಸ್‌ಗಳ ಪ್ರಯಾಣ ದರ ಏರಿಕೆ

ಮೈಸೂರು : ಬೆಂಗಳೂರು-ಮೈಸೂರು ನಡುವಿನ ತಡೆರಹಿತ ಸಾಮಾನ್ಯ ಬಸ್‌ಗಳ ಪ್ರಯಾಣ ದರವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 15 ರೂ. ಏರಿಕೆ ಮಾಡಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.

ಈ ಹಿಂದೆ 185 ಇದ್ದ ದರ ಇದೀಗ 200 ರೂ. ಆಗಿದೆ. ಆದರೆ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರದಲ್ಲಿ ನಿಲುಗಡೆಯಿರುವ ಬಸ್ ಪ್ರಯಾಣ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

ಈ ಕುರಿತು ಮಾಧ್ಯಮವೊಂದರ ಜೊತೆ ಮಾತನಾಡಿರುವ ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಡಿ ಶ್ರೀನಿವಾಸ್, ಶಕ್ತಿ ಯೋಜನೆ ಜಾರಿ ನಂತರ ತಡೆರಹಿತ ಬಸ್ಸುಗಳಿಗೆ ಬೇಡಿಕೆ ಹೆಚ್ಚಾಗಿದೆ. ಬಸ್ಸುಗಳ ಬಿಡಿಭಾಗಗಳು ಹಾಗೂ ಇಂಧನ ದರವೂ ಹೆಚ್ಚಿರುವುದರಿಂದ ದರ ಏರಿಕೆ ಮಾಡಲಾಗಿದೆ ಎಂದು ಪ್ರಯಾಣ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇತ್ತೀಚಿಗೆ ಟೋಲ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಇದು ಕೂಡ ಪ್ರಯಾಣ ದರ ಹೆಚ್ಚಳಕ್ಕೆ ಕಾರಣವಾಗಿದೆ. ಬೆಂಗಳೂರು ಮತ್ತು ಇತರ ವಿಭಾಗಗಳಿಂದ ನಿರ್ವಹಿಸಲ್ಪಡುವ ಬಸ್‌ಗಳನ್ನು ಹೊರತುಪಡಿಸಿ, ಮೈಸೂರು ಕೆಎಸ್‌ಆರ್‌ಟಿಸಿ ವಿಭಾಗದಿಂದ ಮೈಸೂರು-ಬೆಂಗಳೂರು ನಡುವೆ ಪ್ರತಿದಿನ 30 ಬಸ್ಸುಗಳು 65 ಬಾರಿ ತಡೆರಹಿತವಾಗಿ ಸಂಚರಿಸುತ್ತಿವೆ ಎಂದರು.

ಸ್ಥಿರವಾಗಿ ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚವನ್ನು ಪರಿಗಣಿಸಿದಾಗ 15 ರೂ. ಪ್ರಯಾಣ ದರ ಹೆಚ್ಚಳವು ಕನಿಷ್ಠವಾಗಿದೆ. ಆದಾಗ್ಯೂ, ಎರಡು ನಗರಗಳ ನಡುವೆ ಕಾರ್ಯನಿರ್ವಹಿಸುವ ರಾಜಹಂಸ, ಐರಾವತ, ಇವಿ ಪವರ್ ಪ್ಲಸ್ ಮತ್ತು ಇತರ ಎಸಿ ಮತ್ತು ನಾನ್ ಎಸಿ ಐಷಾರಾಮಿ ಬಸ್‌ಗಳ ದರದಲ್ಲಿ ಯಾವುದೇ ಹೆಚ್ಚಳ ಇಲ್ಲ ಎಂದು ಅವರು ಹೇಳಿದರು.

lokesh

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

49 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

3 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago