ಮೈಸೂರು

ಬೆಂಗಳೂರು-ಮೈಸೂರು ನಾನ್‌ ಸ್ಟಾಪ್ ಬಸ್‌ಗಳ ಪ್ರಯಾಣ ದರ ಏರಿಕೆ

ಮೈಸೂರು : ಬೆಂಗಳೂರು-ಮೈಸೂರು ನಡುವಿನ ತಡೆರಹಿತ ಸಾಮಾನ್ಯ ಬಸ್‌ಗಳ ಪ್ರಯಾಣ ದರವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 15 ರೂ. ಏರಿಕೆ ಮಾಡಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.

ಈ ಹಿಂದೆ 185 ಇದ್ದ ದರ ಇದೀಗ 200 ರೂ. ಆಗಿದೆ. ಆದರೆ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರದಲ್ಲಿ ನಿಲುಗಡೆಯಿರುವ ಬಸ್ ಪ್ರಯಾಣ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

ಈ ಕುರಿತು ಮಾಧ್ಯಮವೊಂದರ ಜೊತೆ ಮಾತನಾಡಿರುವ ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಡಿ ಶ್ರೀನಿವಾಸ್, ಶಕ್ತಿ ಯೋಜನೆ ಜಾರಿ ನಂತರ ತಡೆರಹಿತ ಬಸ್ಸುಗಳಿಗೆ ಬೇಡಿಕೆ ಹೆಚ್ಚಾಗಿದೆ. ಬಸ್ಸುಗಳ ಬಿಡಿಭಾಗಗಳು ಹಾಗೂ ಇಂಧನ ದರವೂ ಹೆಚ್ಚಿರುವುದರಿಂದ ದರ ಏರಿಕೆ ಮಾಡಲಾಗಿದೆ ಎಂದು ಪ್ರಯಾಣ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇತ್ತೀಚಿಗೆ ಟೋಲ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಇದು ಕೂಡ ಪ್ರಯಾಣ ದರ ಹೆಚ್ಚಳಕ್ಕೆ ಕಾರಣವಾಗಿದೆ. ಬೆಂಗಳೂರು ಮತ್ತು ಇತರ ವಿಭಾಗಗಳಿಂದ ನಿರ್ವಹಿಸಲ್ಪಡುವ ಬಸ್‌ಗಳನ್ನು ಹೊರತುಪಡಿಸಿ, ಮೈಸೂರು ಕೆಎಸ್‌ಆರ್‌ಟಿಸಿ ವಿಭಾಗದಿಂದ ಮೈಸೂರು-ಬೆಂಗಳೂರು ನಡುವೆ ಪ್ರತಿದಿನ 30 ಬಸ್ಸುಗಳು 65 ಬಾರಿ ತಡೆರಹಿತವಾಗಿ ಸಂಚರಿಸುತ್ತಿವೆ ಎಂದರು.

ಸ್ಥಿರವಾಗಿ ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚವನ್ನು ಪರಿಗಣಿಸಿದಾಗ 15 ರೂ. ಪ್ರಯಾಣ ದರ ಹೆಚ್ಚಳವು ಕನಿಷ್ಠವಾಗಿದೆ. ಆದಾಗ್ಯೂ, ಎರಡು ನಗರಗಳ ನಡುವೆ ಕಾರ್ಯನಿರ್ವಹಿಸುವ ರಾಜಹಂಸ, ಐರಾವತ, ಇವಿ ಪವರ್ ಪ್ಲಸ್ ಮತ್ತು ಇತರ ಎಸಿ ಮತ್ತು ನಾನ್ ಎಸಿ ಐಷಾರಾಮಿ ಬಸ್‌ಗಳ ದರದಲ್ಲಿ ಯಾವುದೇ ಹೆಚ್ಚಳ ಇಲ್ಲ ಎಂದು ಅವರು ಹೇಳಿದರು.

lokesh

Recent Posts

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

2 mins ago

ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಇಸ್ಲಾಮಾಬಾದ್:‌ 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ನನ್ನು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…

8 mins ago

ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…

41 mins ago

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ…

1 hour ago

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

2 hours ago

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

3 hours ago