ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ.
ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ. ಈ ಸಂದರ್ಭದಲ್ಲಿ ಮನೆಯ ಚಾವಣಿ ಸೇರಿದಂತೆ ತಂಬಾಕು ಹದ ಮಾಡುವ ಮನೆಯ ಎಲ್ಲಾ ಪರಿಕರಗಳು ಕೂಡ ಸುಟ್ಟು ಹೋಗಿವೆ.
ತಕ್ಷಣ ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ಬೆಂಕಿ ನಂದಿಸಿದ್ದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ತಗುಲುವುದು ತಪ್ಪಿದೆ. ಬೆಂಕಿ ಅವಘಡದಿಂದ ೫-೬ ಲಕ್ಷ ರೂ. ನಷ್ಟವಾಗಿದೆ. ಆದ್ದರಿಂದ ನಮಗೆ ಪರಿಹಾರವನ್ನು ಕೊಡಬೇಕೆಂದು ನಷ್ಟಕ್ಕೆ ಒಳಗಾಗಿರುವ ರೈತ ರವಿ ಮನವಿ ಮಾಡಿದರು. ರೈತ ರವಿ ಅವರ ನೆರವಿಗೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಬರಬೇಕೆಂದು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ್ ಒತ್ತಾಯಿಸಿದ್ದಾರೆ.





