Barn destroyed in accidental fire.
ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ.
ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ. ಈ ಸಂದರ್ಭದಲ್ಲಿ ಮನೆಯ ಚಾವಣಿ ಸೇರಿದಂತೆ ತಂಬಾಕು ಹದ ಮಾಡುವ ಮನೆಯ ಎಲ್ಲಾ ಪರಿಕರಗಳು ಕೂಡ ಸುಟ್ಟು ಹೋಗಿವೆ.
ತಕ್ಷಣ ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ಬೆಂಕಿ ನಂದಿಸಿದ್ದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ತಗುಲುವುದು ತಪ್ಪಿದೆ. ಬೆಂಕಿ ಅವಘಡದಿಂದ ೫-೬ ಲಕ್ಷ ರೂ. ನಷ್ಟವಾಗಿದೆ. ಆದ್ದರಿಂದ ನಮಗೆ ಪರಿಹಾರವನ್ನು ಕೊಡಬೇಕೆಂದು ನಷ್ಟಕ್ಕೆ ಒಳಗಾಗಿರುವ ರೈತ ರವಿ ಮನವಿ ಮಾಡಿದರು. ರೈತ ರವಿ ಅವರ ನೆರವಿಗೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಬರಬೇಕೆಂದು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ್ ಒತ್ತಾಯಿಸಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…