ಮೈಸೂರು

ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರವಹಿಸಿ: ಡಾ ಕೆ.ವಿ.ರಾಜೇಂದ್ರ

ಮೈಸೂರು: ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿರುವ ಬಗ್ಗೆ ದೂರು ಬಂದಲ್ಲಿ ತಕ್ಷಣ ಆಯಾ ತಾಲೂಕಿನ ತಹಶೀಲ್ದಾರ್, ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟಅಧಿಕಾರಿಗಳ ಗಮನಕ್ಕೆ ತಂದು ಕಲುಷಿತ ನೀರು ಶುದ್ಧನೀರಿನ ಮೂಲಗಳಿಗೆ ಸೇರದಂತೆ ತಡೆಯುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ  ಅಧಿಕಾರಿಗಳಿಗೆ ಸೂಚಿಸಿದರು.

ಇಂದು(ಮೇ 22 ) ಜಿಲ್ಲಾ ಪಂಚಾಯತ್ ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯಾ ತಾಲೂಕಿನ ತಹಶೀಲ್ದಾರ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಮಹಾನಗರ ಪಾಲಿಕೆಯ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಹಾಗೂ ನಗರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಪೂರೈಕೆ ಸಂಬಂಧ ಸಭೆ ನಡೆಸಿ ಮಾತನಾಡಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಗ್ರಾಮ ಸ್ವಚ್ಛತೆ ಕುರಿತು ಗ್ರಾಮದ ಕೆಲವು ವಾರ್ಡ್‌ಗಳಲ್ಲಿನ ಚರಂಡಿ ನಿರ್ವಹಣೆ ಹಾಗೂ ಸ್ವಚ್ಛತೆಯ ಬಗ್ಗೆ ಅಧಿಕಾರಿಗಳು ಅಗತ್ಯವಾಗಿ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಲು ಕಾರ್ಯಕರ್ತೆಯರು ಗ್ರಾಮದ ಪ್ರತಿ ಮನೆಗೂ ಭೇಟಿ ನೀಡಿ ನೀರಿನ ಶೇಖರಣೆ ಹಾಗೂ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಹವಾಮಾನ ಬದಲಾವಣೆ ಮತ್ತಿತರ ಕಾರಣಗಳಿಂದ ಕರಳು ಬೇನೆ (ಗ್ಯಾಸ್ಟ್ರೋ ಎಂಟರಿಟೈಸ್) ಸೇರಿದಂತೆ ಕರುಳು ಸಂಬಂಧಿ ರೋಗಕ್ಕೀಡಾಗುವವರಿಗಾಗಿ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ 5 ಬೆಡ್ ಕಾಯ್ದಿರಿಸಿ ಬೇಕು. ಈ ಸಂಬಂಧ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳು ದಾಖಲಾದರೆ ಸಂಬಂಧಪಟ್ಟ ತಾಲೂಕು ಆಸ್ಪತ್ರೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಹೋಟೆಲ್ ಗಳಲ್ಲಿ, ರಸ್ತೆಯ ಬದಿಯ ಪಾನಿಪುರಿ ಇನ್ನಿತರ ಫಾಸ್ಟ್ ಫುಡ್ ಸೆಂಟರ್ ಗಳಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ತಿಳಿಸಬೇಕು. ಜೊತೆಗೆ ಶುದ್ಧ ಕುಡಿಯುವ ನೀರನ್ನು ಗ್ರಾಹಕರಿಗೆ ನೀಡಬೇಕು ಹಾಗೂ ಬಿಸಿ ನೀರು ನೀಡಬೇಕು ಎಂದು ಸಲಹೆ ನೀಡಬೇಕು ಎಂದರು.

ಗ್ರಾಮೀಣ ಜನವಸತಿ ಪ್ರದೇಶಗಳಿಗೆ ನೀರನ್ನು ಸರಬರಾಜು ಮಾಡುವ ಮುನ್ನ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆಯ ಅಧಿಕಾರಿಗಳು ಖುದ್ದಾಗಿ ಭೇಟಿನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ನಂತರ ಸರಬರಾಜು ಮಾಡಬೇಕು ಎಂದು ಸೂಚಿಸಿದರು.

ಎತ್ತರ ಇರುವ ಬೋರ್ವೆಲ್ ಗಳ ಸುತ್ತಲು ಪ್ಲಾಟ್ ಫಾರಂ ಳನ್ನು ನಿರ್ಮಿಸಿ ಚರಂಡಿ ನೀರು ಹೋಗದಂತೆ ತಡೆಯಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಸಹಾಯವಾಣಿ 0821-252 6355 ಅಧವಾ ಸಂ. 0821-2423800, 1077 ಕಂಟ್ರೋಲ್ ರೂಂ ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಪೈಪುಗಳು ರಸ್ತೆ, ಚರಂಡಿಗಳ ಮೂಲಕ ಹಾದು ಹೊಗಿ ಒಡೆದಿದ್ದರೆ, ತಕ್ಷಣ ಸರಿಪಡಿಸಿ, ಇಲ್ಲದಿದ್ದರೆ ಒಡೆದ ಪೈಪ್‌ನಿಂದ ಸೋರಿಕೆಯಾದ ನೀರು ಕಲುಷಿತ ನೀರಿನೊಂದಿಗೆ ಬೆರೆಯುವ ಸಂಭವವಿರುವುದರಿಂದ ಇದರ ಬಗ್ಗೆ ಮುನ್ನಚ್ಚರಿಕೆ ವಹಿಸಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ ಕುಮಾರಸ್ವಾಮಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಕಾರ್ಯಪಾಲಕ ಅಭಿಯಂತರರು ಹಾಗೂ ಎಲ್ಲಾ ತಾಲೂಕಿನಲ್ಲಿ ತಹಶೀಲ್ದಾರ್ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

9 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago