ಮೈಸೂರು

ಶಾಲಾ-ಕಾಲೇಜು ಬಳಿ ತಂಬಾಕು ಮಾರಾಟ ಮಾಡದಂತೆ ಎಚ್ಚರವಹಿಸಿ: ಎಡಿಸಿ ಶಿವರಾಜು ಸೂಚನೆ

ಮೈಸೂರು : ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟ ನಿಷೇಧ ಮಾಡಲಾಗಿದ್ದು, ಈ ಬಗ್ಗೆ ಎಚ್ಚರವಹಿಸಬೇಕು.  ಕಾನೂನು ಉಲ್ಲಂಘಿಸಿದರೆ  ಅಂತವರ ಮೇಲೆ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು  ಸೂಚಿಸಿದರು.

ಇಂದು(ಜ.09) ಜಿಲ್ಲಾಧಿಕಾರಿ  ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆಯನ್ನು (ಕೋಟ್ಪಾ) ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದರು.

ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರವಾನಗಿ ಪಡೆದುಕೊಳ್ಳಬೇಕು. ಈ ಬಗ್ಗೆ ಹೊಸದಾಗಿ ಸರ್ಕಾರದ ಆದೇಶ ಆಗಿದೆ. ಈ ಸಂಬಂಧ ಸಂಬಂಧಿಸಿದ ಇಲಾಖೆಗಳು ಕ್ರಮವಹಿಸಬೇಕು. ಮೈಸೂರು ಜಿಲ್ಲೆಯಲ್ಲಿ ಹೆಚ್ಚು ತಂಬಾಕು ಬೆಳೆಯುವ ಜಿಲ್ಲೆಯಾಗಿದ್ದೂ ಪ್ರತಿ ವರ್ಷ ಶೇ. 5 ರಷ್ಟು ತಂಬಾಕು ಬೆಳೆ ಬೆಳೆಯುವುದನ್ನು ಕಡಿಮೆ ಮಾಡಬೇಕು. ತಂಬಾಕು ಬೆಳೆಗಾರರು ತೋಟಗಾರಿಕೆ ಬೆಳೆಗಳು, ಆಹಾರದ ಬೆಳೆಗಳು ಹಾಗೂ ಇತರೆ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಉತ್ತೇಜನ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಇರುವ ಸ್ಕ್ವಾಡ್ ಟೀಮ್ ಗಳು ಅನಿರೀಕ್ಷಿತವಾಗಿ ರೈಡ್ ಗಳನ್ನು ಮಾಡಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ನಿಯಮ ಉಲ್ಲಂಘನೆ ಆಗಿರುವ ಕುರಿತು ಪ್ರಕರಣಗಳನ್ನು ದಾಖಲಿಸಬೇಕು. ತಂಬಾಕು ಉತ್ಪನ್ನಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು. ತಂಬಾಕು ಉತ್ಪನ್ನಗಳ ಬಳಕೆ ಕಡಿಮೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದರು.

ಯುವ ಸಮೂಹವು ಸಾರ್ವಜನಿಕ ಸ್ಥಳಗಳಲ್ಲಿ ಕಾಲೇಜು ಆವರಣಗಳಲ್ಲಿ ಬೀಡಿ ಸಿಗರೇಟು ಸೇವನೆ ಮಾಡುವುದನ್ನು ನಿಲ್ಲಿಸಬೇಕು. ಉಲ್ಲಂಘನೆ ಮಾಡಿದರೆ ಪೊಲೀಸ್ ಇಲಾಖೆ ದಂಡ ವಿಧಿಸಬೇಕು. ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋಟ್ಪಾ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಶಾಲೆ, ಕಾಲೇಜುಗಳನ್ನು ತಂಬಾಕು ಮುಕ್ತ ವಲಯಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಶಾಲಾ, ಕಾಲೇಜುಗಳ ಬಳಿ ತಂಬಾಕು ಮಾರಾಟ ಮಾಡುವುದು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿ, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ, ಟೀ ಸ್ಟಾಲ್, ಕಾಂಡಿಮೆಂಟ್‌ಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ವಲಯ ನಾಮಫಲಕಗಳನ್ನು ಅಳವಡಿಸಿಕೊಳ್ಳುವ ಜತೆಗೆ ಬಿಡಿ ಬಿಡಿಯಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಮಹಾನಗರ ಪಾಲಿಕೆ, ನಗರಸಭೆ ಹಾಗೂ ಪುರಸಭೆ ವ್ಯಾಪಾರದ ಪರವಾನಗಿ ನೀಡುವಾಗ ಕೋಟ್ಪಾ ಕಾಯ್ದೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ 2123 ಪ್ರಕರಣ ದಾಖಲಿಸಿ 2,39,220 ದಂಡವನ್ನು ವಿಧಿಸಲಾಗಿದ್ದು ದಾಖಲಿಸಿರುವ ಪ್ರಕರಣಗಳು ತುಂಬಾ ಕಡಿಮೆ. ಹೆಚ್ಚಿನ ನಿಯಮ ಉಲ್ಲಂಘನೆ ಆಗುತ್ತಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸವಿತಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ನಾಗರಾಜು, ಜಿಲ್ಲಾ ಸಮಾಲೋಚಕರಾದ ಶಿವಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ ಕೆ ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…

6 mins ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…

19 mins ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…

35 mins ago

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…

44 mins ago

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…

55 mins ago

ಶಾಸಕ ವಿನಯ್‌ ಕುಲಕರ್ಣಿಗೆ ಬಿಗ್‌ ರಿಲೀಫ್:‌ ಜಾಮೀನು ಮಂಜೂರು

ನವದೆಹಲಿ: ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಜಾಮೀನು…

1 hour ago